ಬ್ರೇಕಿಂಗ್ ನ್ಯೂಸ್
09-04-21 05:47 pm Bangalore Correspondent ಕ್ರೈಂ
ಬೆಂಗಳೂರು, ಏ 9 : ಚಾಕು, ಪೇಪರ್ ಕಟ್ಟರ್, ರೇಜರ್ ಇತರ ಹರಿತ ವಸ್ತುಗಳನ್ನು ಕಾಲಿನ ಮಣಿಗಂಟಿನ ಬಳಿ ಅಡಗಿಸಿಕೊಂಡಿದ್ದ 26 ವರ್ಷದ ಗರ್ಭಿಣಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.
ಯುವತಿಯನ್ನು ಅಸ್ಸಾಂ ಮೂಲದ ಉಮಾದೇವಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.10 ಕ್ಕೆ ಬೆಂಗಳೂರಿನಿಂದ ಗುವಾಹಟಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ದೇವಿ ಮತ್ತು ಆಕೆಯ ನಾಲ್ಕು ಕುಟುಂಬ ಸದಸ್ಯರು ತಪಾಸಣೆಗಾಗಿ ಮುಂಜಾನೆ 5.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಗರ್ಭಿಣಿಯ ನಡವಳಿಕೆ ಕಂಡು ಸಿಐಎಸ್ಎಫ್ ಅಧಿಕಾರಿಗಳು ಅನುಮಾನದಿಂದ ತಪಾಸಣೆ ತೀವ್ರಗೊಳಿಸಿದಾಗ ಆಕೆಯ ಎಡಕಾಲಿನ ಪಾದದ ಬಳಿ ಹರಿತವಾದ ವಸ್ತುಗಳಾದ ಪೇಪರ್ ಕಟ್ಟರ್, ಚಾಕು ,ಸಿಂಗಲ್ ಬ್ಲೇಡ್, ರೇಜರ್, ನೇಲ್ಕ್ಲಿಪ್ಪರ್, ಮೆಟಲ್ ಫೈಲರ್, ಇಕ್ಕಳ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.

ಆಕೆಯನ್ನು ವಿಚಾರಣೆ ನಡೆಸಿದಾಗ "ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದು, ನಮ್ಮ ಸಮುದಾಯದಲ್ಲಿ ಗರ್ಭಿಣಿಯರು ಹೊಟ್ಟೆಯ ಸುತ್ತಲೂ ಲೋಹದ ವಸ್ತುಗಳನ್ನು ಕಟ್ಟುವುದು ಸಂಪ್ರದಾಯ. ಹೊಟ್ಟೆಯ ಭಾಗಕ್ಕೆ ಕಟ್ಟಲು ಆತಂಕವಾಗಿ ತನ್ನ ಪಾದದ ಬಳಿ ಕಟ್ಟಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಪಾಸಣೆ ವೇಳೆ ಅಧಿಕಾರಿಗಳು ತಕ್ಷಣ ಇಂಡಿಗೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಹೆಚ್ಚುವರಿ ಪರಿಶೀಲನೆಗಾಗಿ ವಿಮಾನದಲ್ಲಿ ಕುಳಿತಿದ್ದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪತಿ ಸೇರಿದಂತೆ ಆಕೆಯ ಕುಟುಂಬಸ್ಥರು ಹಾಗೂ ಅವರ ಲಗೇಜ್ ಗಳನ್ನು ವಿಮಾನದಿಂದ ಇಳಿಸಿದ್ದಾರೆ.
ಶಂಕಿತೆ ಗರ್ಭಿಣಿ ವಿಮಾನದಲ್ಲಿ ಕಾಕ್ಪಿಟ್ಗೆ ಸಮೀಪವಿರುವ ಸೀಟ್ ನಂಬರ್ 1 ಎ ಬುಕ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ಆಕೆಯನ್ನು ಹಾಗೂ ಆಕೆಯ ಸಮುದಾಯ ಪದ್ಧತಿಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
A 26-year-old pregnant woman passenger with a knife, paper cutter, razor and other sharp objects strapped to her ankle with duct tape, was arrested at the Kempegowda International Airport on Thursday.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am