ಬ್ರೇಕಿಂಗ್ ನ್ಯೂಸ್
09-04-21 05:47 pm Bangalore Correspondent ಕ್ರೈಂ
ಬೆಂಗಳೂರು, ಏ 9 : ಚಾಕು, ಪೇಪರ್ ಕಟ್ಟರ್, ರೇಜರ್ ಇತರ ಹರಿತ ವಸ್ತುಗಳನ್ನು ಕಾಲಿನ ಮಣಿಗಂಟಿನ ಬಳಿ ಅಡಗಿಸಿಕೊಂಡಿದ್ದ 26 ವರ್ಷದ ಗರ್ಭಿಣಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.
ಯುವತಿಯನ್ನು ಅಸ್ಸಾಂ ಮೂಲದ ಉಮಾದೇವಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.10 ಕ್ಕೆ ಬೆಂಗಳೂರಿನಿಂದ ಗುವಾಹಟಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ದೇವಿ ಮತ್ತು ಆಕೆಯ ನಾಲ್ಕು ಕುಟುಂಬ ಸದಸ್ಯರು ತಪಾಸಣೆಗಾಗಿ ಮುಂಜಾನೆ 5.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಗರ್ಭಿಣಿಯ ನಡವಳಿಕೆ ಕಂಡು ಸಿಐಎಸ್ಎಫ್ ಅಧಿಕಾರಿಗಳು ಅನುಮಾನದಿಂದ ತಪಾಸಣೆ ತೀವ್ರಗೊಳಿಸಿದಾಗ ಆಕೆಯ ಎಡಕಾಲಿನ ಪಾದದ ಬಳಿ ಹರಿತವಾದ ವಸ್ತುಗಳಾದ ಪೇಪರ್ ಕಟ್ಟರ್, ಚಾಕು ,ಸಿಂಗಲ್ ಬ್ಲೇಡ್, ರೇಜರ್, ನೇಲ್ಕ್ಲಿಪ್ಪರ್, ಮೆಟಲ್ ಫೈಲರ್, ಇಕ್ಕಳ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.

ಆಕೆಯನ್ನು ವಿಚಾರಣೆ ನಡೆಸಿದಾಗ "ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದು, ನಮ್ಮ ಸಮುದಾಯದಲ್ಲಿ ಗರ್ಭಿಣಿಯರು ಹೊಟ್ಟೆಯ ಸುತ್ತಲೂ ಲೋಹದ ವಸ್ತುಗಳನ್ನು ಕಟ್ಟುವುದು ಸಂಪ್ರದಾಯ. ಹೊಟ್ಟೆಯ ಭಾಗಕ್ಕೆ ಕಟ್ಟಲು ಆತಂಕವಾಗಿ ತನ್ನ ಪಾದದ ಬಳಿ ಕಟ್ಟಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಪಾಸಣೆ ವೇಳೆ ಅಧಿಕಾರಿಗಳು ತಕ್ಷಣ ಇಂಡಿಗೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಹೆಚ್ಚುವರಿ ಪರಿಶೀಲನೆಗಾಗಿ ವಿಮಾನದಲ್ಲಿ ಕುಳಿತಿದ್ದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪತಿ ಸೇರಿದಂತೆ ಆಕೆಯ ಕುಟುಂಬಸ್ಥರು ಹಾಗೂ ಅವರ ಲಗೇಜ್ ಗಳನ್ನು ವಿಮಾನದಿಂದ ಇಳಿಸಿದ್ದಾರೆ.
ಶಂಕಿತೆ ಗರ್ಭಿಣಿ ವಿಮಾನದಲ್ಲಿ ಕಾಕ್ಪಿಟ್ಗೆ ಸಮೀಪವಿರುವ ಸೀಟ್ ನಂಬರ್ 1 ಎ ಬುಕ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ಆಕೆಯನ್ನು ಹಾಗೂ ಆಕೆಯ ಸಮುದಾಯ ಪದ್ಧತಿಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
A 26-year-old pregnant woman passenger with a knife, paper cutter, razor and other sharp objects strapped to her ankle with duct tape, was arrested at the Kempegowda International Airport on Thursday.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm