ಬ್ರೇಕಿಂಗ್ ನ್ಯೂಸ್
09-04-21 05:47 pm Bangalore Correspondent ಕ್ರೈಂ
ಬೆಂಗಳೂರು, ಏ 9 : ಚಾಕು, ಪೇಪರ್ ಕಟ್ಟರ್, ರೇಜರ್ ಇತರ ಹರಿತ ವಸ್ತುಗಳನ್ನು ಕಾಲಿನ ಮಣಿಗಂಟಿನ ಬಳಿ ಅಡಗಿಸಿಕೊಂಡಿದ್ದ 26 ವರ್ಷದ ಗರ್ಭಿಣಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.
ಯುವತಿಯನ್ನು ಅಸ್ಸಾಂ ಮೂಲದ ಉಮಾದೇವಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.10 ಕ್ಕೆ ಬೆಂಗಳೂರಿನಿಂದ ಗುವಾಹಟಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ದೇವಿ ಮತ್ತು ಆಕೆಯ ನಾಲ್ಕು ಕುಟುಂಬ ಸದಸ್ಯರು ತಪಾಸಣೆಗಾಗಿ ಮುಂಜಾನೆ 5.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಗರ್ಭಿಣಿಯ ನಡವಳಿಕೆ ಕಂಡು ಸಿಐಎಸ್ಎಫ್ ಅಧಿಕಾರಿಗಳು ಅನುಮಾನದಿಂದ ತಪಾಸಣೆ ತೀವ್ರಗೊಳಿಸಿದಾಗ ಆಕೆಯ ಎಡಕಾಲಿನ ಪಾದದ ಬಳಿ ಹರಿತವಾದ ವಸ್ತುಗಳಾದ ಪೇಪರ್ ಕಟ್ಟರ್, ಚಾಕು ,ಸಿಂಗಲ್ ಬ್ಲೇಡ್, ರೇಜರ್, ನೇಲ್ಕ್ಲಿಪ್ಪರ್, ಮೆಟಲ್ ಫೈಲರ್, ಇಕ್ಕಳ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.
ಆಕೆಯನ್ನು ವಿಚಾರಣೆ ನಡೆಸಿದಾಗ "ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದು, ನಮ್ಮ ಸಮುದಾಯದಲ್ಲಿ ಗರ್ಭಿಣಿಯರು ಹೊಟ್ಟೆಯ ಸುತ್ತಲೂ ಲೋಹದ ವಸ್ತುಗಳನ್ನು ಕಟ್ಟುವುದು ಸಂಪ್ರದಾಯ. ಹೊಟ್ಟೆಯ ಭಾಗಕ್ಕೆ ಕಟ್ಟಲು ಆತಂಕವಾಗಿ ತನ್ನ ಪಾದದ ಬಳಿ ಕಟ್ಟಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಪಾಸಣೆ ವೇಳೆ ಅಧಿಕಾರಿಗಳು ತಕ್ಷಣ ಇಂಡಿಗೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಹೆಚ್ಚುವರಿ ಪರಿಶೀಲನೆಗಾಗಿ ವಿಮಾನದಲ್ಲಿ ಕುಳಿತಿದ್ದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪತಿ ಸೇರಿದಂತೆ ಆಕೆಯ ಕುಟುಂಬಸ್ಥರು ಹಾಗೂ ಅವರ ಲಗೇಜ್ ಗಳನ್ನು ವಿಮಾನದಿಂದ ಇಳಿಸಿದ್ದಾರೆ.
ಶಂಕಿತೆ ಗರ್ಭಿಣಿ ವಿಮಾನದಲ್ಲಿ ಕಾಕ್ಪಿಟ್ಗೆ ಸಮೀಪವಿರುವ ಸೀಟ್ ನಂಬರ್ 1 ಎ ಬುಕ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ಆಕೆಯನ್ನು ಹಾಗೂ ಆಕೆಯ ಸಮುದಾಯ ಪದ್ಧತಿಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
A 26-year-old pregnant woman passenger with a knife, paper cutter, razor and other sharp objects strapped to her ankle with duct tape, was arrested at the Kempegowda International Airport on Thursday.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm