ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm