ಬ್ರೇಕಿಂಗ್ ನ್ಯೂಸ್
13-04-21 02:46 pm Headline Karnataka News Network ಕ್ರೈಂ
ನವದೆಹಲಿ, ಎ.13: ಮಹಿಳೆ ಮತ್ತು ಆಕೆಯ ಪತಿ ಜೊತೆಯಾಗಿ ಜನನಿಬಿಡ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆದರೆ, ಅವನಿಗೆ ಅದೇನಾಯ್ತೋ ಏನೋ.. ದಿಢೀರ್ ಆಗಿ ಚಾಕು ಹೊರತೆಗೆದು ಆಕೆಯ ಮೇಲೆ ಯದ್ವಾತದ್ವಾ ಇರಿದಿದ್ದಾನೆ. ಸಾವಿರಾರು ಮಂದಿ ಓಡಾಡುವ ರಸ್ತೆಯಾಗಿದ್ದರಿಂದ ವಾಹನಗಳು ಅದೇ ರಸ್ತೆಯಲ್ಲಿ ಸರಣಿಯಂತೆ ಸಾಗುತ್ತಿದ್ದವು. ಅಕ್ಕಪಕ್ಕದ ಕಟ್ಟಡದಲ್ಲಿ ನಿಂತಿದ್ದ ಜನ ಇದನ್ನು ನೋಡುತ್ತಾ ವಿಡಿಯೋ ಮಾಡಿದ್ದರೇ ವಿನಾ ಯಾರು ಕೂಡ ತಡೆಯಲು ಬರಲಿಲ್ಲ. ಆರೋಪಿ ಇರಿದ ಬಳಿಕ ಏನೂ ಆಗದಂತೆ ನಡೆದು ಹೋಗಿದ್ದಾನೆ.

ಹೌದು.. ಈ ರೀತಿಯ ಭೀಭತ್ತ ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ನಗರದಲ್ಲಿ. ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ನಡೆದ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷ ಅಂದ್ರೆ, ಯುವತಿ ರಸ್ತೆಗೆ ಬಿದ್ದು ಸತ್ತ ಬಳಿಕವೂ ಆರೋಪಿ 25 ಬಾರಿ ಚಾಕುವಿನಿಂದ ಯದ್ವಾತದ್ವಾ ಇರಿದಿದ್ದಾನೆ.

ಮೃತ ಯುವತಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ನೀಲು ಮೆಹ್ತಾ ಎಂದು ಗುರುತಿಸಲಾಗಿದೆ. ಆರೋಪಿ, ನೀಲುವಿನ ಪತಿಯನ್ನು ಹರೀಶ್ ಮೆಹ್ತಾ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯಾರೇಜ್ ಬ್ಯೂರೋದಲ್ಲಿ ಉದ್ಯೋಗಿ ಆಗಿದ್ದ ಹರೀಶ್ ಮೆಹ್ತಾ ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ. ಇಬ್ಬರೂ ಗುಜರಾತಿನ ರಾಜಕೋಟ್ ನಿವಾಸಿಗಳಾಗಿದ್ದು, ದೆಹಲಿಯ ಬುದ್ಧ್ ವಿಹಾರ್ ಫೇಸ್ ಒಂದರಲ್ಲಿ ಬಾಡಿಗೆ ಮನೆಯಲ್ಲಿದ್ದರು.
ಪತ್ನಿ ಬಗ್ಗೆ ಶಂಕೆ ಹೊಂದಿದ್ದ ಹರೀಶ್ ಮೆಹ್ತಾ ಈ ಕೃತ್ಯ ಮಾಡಿದ್ದಾನೆ ಎನ್ನಲಾಗುತ್ತಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಡಿಯೋ ಭಾರೀ ವೈರಲ್ ಆಗಿದ್ದು ಪತಿಯೇ ಪತ್ನಿಯನ್ನು ಕೈಯಾರೆ ಭೀಭತ್ಸವಾಗಿ ಇರಿದು ಕೊಲ್ಲುವ ದೃಶ್ಯ ಮನಕಲಕುತ್ತಿದೆ.
A 26-year-old woman was stabbed to death by her husband, 40, at a crowded market place in Delhi's Rohini area on Saturday (April 10) on the suspicion of her having an affair with another person. The accused has been arrested by the Delhi Police.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am