ಬ್ರೇಕಿಂಗ್ ನ್ಯೂಸ್
16-04-21 11:50 am Headline Karnataka News Network ಕ್ರೈಂ
ಬೆಂಗಳೂರು,ಎ.16 : ಮಾದಕ ದ್ರವ್ಯ ಜಾಲದಲ್ಲಿ ಸಕ್ರಿಯರಾಗಿದ್ದ ನೈಜೀರಿಯಾ ಮೂಲದ ನಾಲ್ವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಬಾಗಲೂರಿನಲ್ಲಿ ಬಂಧಿಸಿದ್ದಾರೆ. ಅಜಾ ಫ್ರಾನ್ಸಿಸ್, ಚಾರ್ಲೀಸ್ ಚೀಮ, ಮಲಂಗ ಪಾಷಾ, ಜಸೀರ್ ಖಾನ್ಡೆ ಎಂಬ ನಾಲ್ವರನ್ನು ಬಂಧನಕ್ಕೆ ಒಳಪಡಿಸಲಾಗಿದ್ದು, ಬಾಗಲೂರು ಪ್ರದೇಶವನ್ನು ಅಡ್ಡ ಮಾಡಿಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದಾಗ ತಪ್ಪಿತಸ್ಥರು ಸಿಕ್ಕಿಹಾಕಿಕೊಂಡಿದ್ದಾರೆ.
ಬಂಧಿತರಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. 200 ಎಕ್ಸ್ಟಸಿ ಮಾತ್ರೆ, 153 ಗ್ರಾಂ ಎಂಡಿಎಂಎಂ, 5 ಮೊಬೈಲ್, 2 ಬೈಕ್, ನಗದು, ಮಾರಕಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದ್ದು ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ದ್ರವ್ಯ ತಡೆ ಬಗ್ಗೆ ಇತ್ತೀಚೆಗಷ್ಟೇ ಮಾತನಾಡಿದ್ದ ಅಬಕಾರಿ ಸಚಿವ ಗೋಪಾಲಯ್ಯ, ಸಿಎಲ್ 7, ಎಂಎಸ್ಐಎಲ್ ಪರವಾನಗಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. 60 ಜೀಪ್ ಖರೀದಿಸಲು ಅನುಮತಿ ಸಿಕ್ಕಿದೆ. 300 ಬೈಕ್, ಡಿಸಿ ಕಚೇರಿಗೆ 4 ರಿವಾಲ್ವರ್ ನೀಡಲು ನಿರ್ಧಾರ ಮಾಡಲಾಗಿದೆ. ಗಾಂಜಾ, ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿ ನೇಮಕಾತಿ ಮಾಡಲಾಗುತ್ತದೆ. ಈ ಮೂಲಕ ಮಾದಕ ವಸ್ತುಗಳ ಸಾಗಣೆ ತಡೆಯಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಕಾನೂನು ಮತ್ತು ಗೃಹ ಸಚಿವರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಅಬಕಾರಿ ಇಲಾಖೆ ಆದಾಯದ ಬಗ್ಗೆ ಮಾತನಾಡಿ, ಸರ್ಕಾರ ಕೊಟ್ಟ ಟಾರ್ಗೆಟ್ ಅನ್ನು ಈಗಾಗಲೇ ಮುಟ್ಟಿದ್ದೇವೆ. ಇನ್ನು, ತಿಂಗಳ ಅಂತ್ಯದಲ್ಲಿ ಇನ್ನೂ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ. 2020-21ನೇ ಸಾಲಿನ 22700 ಕೋಟಿ ಆದಾಯ ತಲುಪಿದ್ದು, ಮಾರ್ಚ್ 31ರವರೆಗೆ 200 ಕೋಟಿ ಹೆಚ್ಚುವರಿಯಾಗಿ ಸಂಗ್ರಹವಾಗಲಿದೆ ಎಂದು ವಿಧಾನಸೌಧದಲ್ಲಿ ವಿವರಿಸಿದ್ದರು.
Karnataka's Central Crime Branch (CCB) on Thursday arrested four people, including two Nigerian nationals and seized drugs from their possession.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am