ಬ್ರೇಕಿಂಗ್ ನ್ಯೂಸ್
31-07-20 06:45 pm Headline Karnataka News Network ಕ್ರೈಂ
ಮುಂಬೈ: ಕೌಟುಂಬಿಕ ಕಲಹದಿಂದ ಸ್ನೇಹಿತನ ಸಹಾಯದಿಂದ ಪತ್ನಿಯನ್ನೇ ಕೊಂದು ಡ್ರಮ್ನಲ್ಲಿ ತುಂಬಿ ಮೃತದೇಹವನ್ನು ಎಸೆದಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಅಂಬುಜ್ ತಿವಾರಿ ಎಂದು ಗುರುತಿಸಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ನೀಲಂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನ ಪಟ್ಟು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಏನಿದು ಪ್ರಕರಣ?
ಜುಲೈ 23 ರಂದು ಆರೋಪಿ ತಿವಾರಿಯ ತಂದೆ ಮಹೇಂದ್ರ ಪೊಲೀಸ್ ಠಾಣೆಗೆ ಬಂದು ತಮ್ಮ ಮಗ ಮತ್ತು ಸೊಸೆ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ನನ್ನ ಮಗ ಸಿಮೆಂಟ್ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಸೊಸೆ ಗೃಹಿಣಿಯಾಗಿದ್ದು, ಜುಲೈ 22 ರಂದು ಇಬ್ಬರೂ ನಾಪತ್ತೆಯಾಗಿದ್ದರು ಎಂದು ಮಹೇಂದ್ರ ಪೊಲೀಸರಿಗೆ ತಿಳಿಸಿದ್ದರು.
ದೂರು ದಾಖಲಿಸಿಕೊಂಡ ನಂತರ ಪೊಲೀಸರು ದಂಪತಿಗಾಗಿ ಹುಡುಕಲು ಪ್ರಾರಂಭಿಸಿದ್ದರು. ಮಂಗಳವಾರ ಘನ್ಸೋಲಿಯಲ್ಲಿ ತಿವಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಪೊಲೀಸರು ಪತ್ನಿಯ ಬಗ್ಗೆ ಪ್ರಶ್ನಿ ಮಾಡಿದ್ದಾರೆ. ಆಗ ಆರೋಪಿ ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿ ಅಂಬುಜ್ನನ್ನ ತೀವ್ರವಾಗಿ ವಿಚಾರಣೆ ಮಾಡಿದ್ದಾರೆ.
ಆಗ ಆರೋಪಿ ಪತ್ನಿಯನ್ನು ತಾನೇ ಕೊಲೆ ಮಾಡಿ ಶವವನ್ನು ಲೋನವಾಲಾದಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಪೊಲೀಸರು ಅಂಬುಜ್ನನ್ನು ಮೃತದೇಹವನ್ನು ಎಸೆದಿರುವ ಜಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಡ್ರಮ್ನಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿದೆ.
ಆರೋಪಿ ತನ್ನ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಪಟ್ಟಿದ್ದನು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಜುಲೈ 23 ರಂದು ಅಂಬುಜ್ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಪತ್ನಿ ನೀಲಂಗೆ ತನ್ನ ಸ್ನೇಹಿತ ಶ್ರೀಕಾಂತ್ ಚೌಬೆ ಮನೆಗೆ ಹೋಗಬೇಕೆಂದು ಹೇಳಿದ್ದನು. ಆದರೆ ಮತ್ತೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಆರೋಪಿ ತಿವಾರಿ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ನೇಹಿತ ಚೌಬೆ ಮನೆಗೆ ಕರೆದು ಪತ್ನಿಯನ್ನು ಕೊಲೆ ಮಾಡಿರುವ ಬಗ್ಗೆ ತಿಳಿಸಿದ್ದಾನೆ. ನಂತರ ನೀಲಂ ಮೃತದೇಹವನ್ನು ಎಸೆಯಲು ಆರೋಪಿ ತಿವಾರಿಗೆ ಸ್ನೇಹಿತ ಸಹಾಯ ಮಾಡಿದ್ದಾನೆ. ನಂತರ ಇಬ್ಬರು ಸೇರಿಕೊಂಡು ಮೃತದೇಹವನ್ನು ಡ್ರಮ್ನಲ್ಲಿ ತುಂಬಿ ಇಟ್ಟು ಲೋನಾವಾಲಾ ಬಳಿಯ ಪೊದೆಗಳಲ್ಲಿ ಎಸೆದಿದ್ದರು.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm