ಬ್ರೇಕಿಂಗ್ ನ್ಯೂಸ್
31-07-20 06:45 pm Headline Karnataka News Network ಕ್ರೈಂ
ಮುಂಬೈ: ಕೌಟುಂಬಿಕ ಕಲಹದಿಂದ ಸ್ನೇಹಿತನ ಸಹಾಯದಿಂದ ಪತ್ನಿಯನ್ನೇ ಕೊಂದು ಡ್ರಮ್ನಲ್ಲಿ ತುಂಬಿ ಮೃತದೇಹವನ್ನು ಎಸೆದಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಅಂಬುಜ್ ತಿವಾರಿ ಎಂದು ಗುರುತಿಸಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ನೀಲಂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನ ಪಟ್ಟು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಏನಿದು ಪ್ರಕರಣ?
ಜುಲೈ 23 ರಂದು ಆರೋಪಿ ತಿವಾರಿಯ ತಂದೆ ಮಹೇಂದ್ರ ಪೊಲೀಸ್ ಠಾಣೆಗೆ ಬಂದು ತಮ್ಮ ಮಗ ಮತ್ತು ಸೊಸೆ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ನನ್ನ ಮಗ ಸಿಮೆಂಟ್ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಸೊಸೆ ಗೃಹಿಣಿಯಾಗಿದ್ದು, ಜುಲೈ 22 ರಂದು ಇಬ್ಬರೂ ನಾಪತ್ತೆಯಾಗಿದ್ದರು ಎಂದು ಮಹೇಂದ್ರ ಪೊಲೀಸರಿಗೆ ತಿಳಿಸಿದ್ದರು.
ದೂರು ದಾಖಲಿಸಿಕೊಂಡ ನಂತರ ಪೊಲೀಸರು ದಂಪತಿಗಾಗಿ ಹುಡುಕಲು ಪ್ರಾರಂಭಿಸಿದ್ದರು. ಮಂಗಳವಾರ ಘನ್ಸೋಲಿಯಲ್ಲಿ ತಿವಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಪೊಲೀಸರು ಪತ್ನಿಯ ಬಗ್ಗೆ ಪ್ರಶ್ನಿ ಮಾಡಿದ್ದಾರೆ. ಆಗ ಆರೋಪಿ ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿ ಅಂಬುಜ್ನನ್ನ ತೀವ್ರವಾಗಿ ವಿಚಾರಣೆ ಮಾಡಿದ್ದಾರೆ.
ಆಗ ಆರೋಪಿ ಪತ್ನಿಯನ್ನು ತಾನೇ ಕೊಲೆ ಮಾಡಿ ಶವವನ್ನು ಲೋನವಾಲಾದಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಪೊಲೀಸರು ಅಂಬುಜ್ನನ್ನು ಮೃತದೇಹವನ್ನು ಎಸೆದಿರುವ ಜಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಡ್ರಮ್ನಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿದೆ.
ಆರೋಪಿ ತನ್ನ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಪಟ್ಟಿದ್ದನು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಜುಲೈ 23 ರಂದು ಅಂಬುಜ್ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಪತ್ನಿ ನೀಲಂಗೆ ತನ್ನ ಸ್ನೇಹಿತ ಶ್ರೀಕಾಂತ್ ಚೌಬೆ ಮನೆಗೆ ಹೋಗಬೇಕೆಂದು ಹೇಳಿದ್ದನು. ಆದರೆ ಮತ್ತೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಆರೋಪಿ ತಿವಾರಿ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ನೇಹಿತ ಚೌಬೆ ಮನೆಗೆ ಕರೆದು ಪತ್ನಿಯನ್ನು ಕೊಲೆ ಮಾಡಿರುವ ಬಗ್ಗೆ ತಿಳಿಸಿದ್ದಾನೆ. ನಂತರ ನೀಲಂ ಮೃತದೇಹವನ್ನು ಎಸೆಯಲು ಆರೋಪಿ ತಿವಾರಿಗೆ ಸ್ನೇಹಿತ ಸಹಾಯ ಮಾಡಿದ್ದಾನೆ. ನಂತರ ಇಬ್ಬರು ಸೇರಿಕೊಂಡು ಮೃತದೇಹವನ್ನು ಡ್ರಮ್ನಲ್ಲಿ ತುಂಬಿ ಇಟ್ಟು ಲೋನಾವಾಲಾ ಬಳಿಯ ಪೊದೆಗಳಲ್ಲಿ ಎಸೆದಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm