ಬ್ರೇಕಿಂಗ್ ನ್ಯೂಸ್
31-07-20 06:45 pm Headline Karnataka News Network ಕ್ರೈಂ
ಮುಂಬೈ: ಕೌಟುಂಬಿಕ ಕಲಹದಿಂದ ಸ್ನೇಹಿತನ ಸಹಾಯದಿಂದ ಪತ್ನಿಯನ್ನೇ ಕೊಂದು ಡ್ರಮ್ನಲ್ಲಿ ತುಂಬಿ ಮೃತದೇಹವನ್ನು ಎಸೆದಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಅಂಬುಜ್ ತಿವಾರಿ ಎಂದು ಗುರುತಿಸಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ನೀಲಂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನ ಪಟ್ಟು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಏನಿದು ಪ್ರಕರಣ?
ಜುಲೈ 23 ರಂದು ಆರೋಪಿ ತಿವಾರಿಯ ತಂದೆ ಮಹೇಂದ್ರ ಪೊಲೀಸ್ ಠಾಣೆಗೆ ಬಂದು ತಮ್ಮ ಮಗ ಮತ್ತು ಸೊಸೆ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ನನ್ನ ಮಗ ಸಿಮೆಂಟ್ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಸೊಸೆ ಗೃಹಿಣಿಯಾಗಿದ್ದು, ಜುಲೈ 22 ರಂದು ಇಬ್ಬರೂ ನಾಪತ್ತೆಯಾಗಿದ್ದರು ಎಂದು ಮಹೇಂದ್ರ ಪೊಲೀಸರಿಗೆ ತಿಳಿಸಿದ್ದರು.
ದೂರು ದಾಖಲಿಸಿಕೊಂಡ ನಂತರ ಪೊಲೀಸರು ದಂಪತಿಗಾಗಿ ಹುಡುಕಲು ಪ್ರಾರಂಭಿಸಿದ್ದರು. ಮಂಗಳವಾರ ಘನ್ಸೋಲಿಯಲ್ಲಿ ತಿವಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಪೊಲೀಸರು ಪತ್ನಿಯ ಬಗ್ಗೆ ಪ್ರಶ್ನಿ ಮಾಡಿದ್ದಾರೆ. ಆಗ ಆರೋಪಿ ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿ ಅಂಬುಜ್ನನ್ನ ತೀವ್ರವಾಗಿ ವಿಚಾರಣೆ ಮಾಡಿದ್ದಾರೆ.
ಆಗ ಆರೋಪಿ ಪತ್ನಿಯನ್ನು ತಾನೇ ಕೊಲೆ ಮಾಡಿ ಶವವನ್ನು ಲೋನವಾಲಾದಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಪೊಲೀಸರು ಅಂಬುಜ್ನನ್ನು ಮೃತದೇಹವನ್ನು ಎಸೆದಿರುವ ಜಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಡ್ರಮ್ನಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿದೆ.
ಆರೋಪಿ ತನ್ನ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಪಟ್ಟಿದ್ದನು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಜುಲೈ 23 ರಂದು ಅಂಬುಜ್ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಪತ್ನಿ ನೀಲಂಗೆ ತನ್ನ ಸ್ನೇಹಿತ ಶ್ರೀಕಾಂತ್ ಚೌಬೆ ಮನೆಗೆ ಹೋಗಬೇಕೆಂದು ಹೇಳಿದ್ದನು. ಆದರೆ ಮತ್ತೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಆರೋಪಿ ತಿವಾರಿ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ನೇಹಿತ ಚೌಬೆ ಮನೆಗೆ ಕರೆದು ಪತ್ನಿಯನ್ನು ಕೊಲೆ ಮಾಡಿರುವ ಬಗ್ಗೆ ತಿಳಿಸಿದ್ದಾನೆ. ನಂತರ ನೀಲಂ ಮೃತದೇಹವನ್ನು ಎಸೆಯಲು ಆರೋಪಿ ತಿವಾರಿಗೆ ಸ್ನೇಹಿತ ಸಹಾಯ ಮಾಡಿದ್ದಾನೆ. ನಂತರ ಇಬ್ಬರು ಸೇರಿಕೊಂಡು ಮೃತದೇಹವನ್ನು ಡ್ರಮ್ನಲ್ಲಿ ತುಂಬಿ ಇಟ್ಟು ಲೋನಾವಾಲಾ ಬಳಿಯ ಪೊದೆಗಳಲ್ಲಿ ಎಸೆದಿದ್ದರು.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm