ಬ್ರೇಕಿಂಗ್ ನ್ಯೂಸ್
28-04-21 10:08 am Mangalore Correspondent ಕ್ರೈಂ
Photo credits : ungender
ಮಂಗಳೂರು, ಎ.28: ನಗರ ಹೊರ ವಲಯದ ಅರ್ಕುಳ ಗ್ರಾಮದ ಅಡ್ಯಾರ್ ಗುಡ್ಡೆ ಎಂಬಲ್ಲಿ ಎರಡು ವರ್ಷದ ಹಿಂದೆ ಅಪ್ರಾಪ್ತೆ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದಿದ್ದ ಪ್ರಮುಖ ಆರೋಪಿ ನಝೀರ್ ಎಂಬಾತನಿಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ 1.16 ಲಕ್ಷ ರೂ. ದಂಡ ವಿಧಿಸಿ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಫೋಕ್ಸೊ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಮತ್ತೋರ್ವ ಆರೋಪಿ ಶಮೀರ್ಗೆ 6 ತಿಂಗಳು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.
ಪ್ರಕರಣದ ಹಿನ್ನೆಲೆ:
2019 ಫೆ.9ರಂದು ಪ್ರಕರಣದ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಅಡ್ಯಾರ್ ಬಳಿ ಇರುವ ಗುಡ್ಡೆಯ ಕಲ್ಲು ಬಂಡೆಯ ಮೇಲೆ ಕುಳಿತಿದ್ದಾಗ ಅಲ್ಲಿಗೆ ಬಂದ ವಳಚ್ಚಿಲ್ ಪದವು ನಿವಾಸಿಗಳಾದ ನಝೀರ್ ಮತ್ತು ಶಮೀರ್ ಇಬ್ಬರ ಫೊಟೋ ತೆಗೆದು ವಿಡಿಯೋ ಮಾಡಿ ಜೋಡಿಯನ್ನು ವಿಚಾರಿಸಿದ್ದರು. ಬಳಿಕ ಫೊಟೋ, ವಿಡಿಯೋ ಡಿಲೀಟ್ ಮಾಡಲು 20 ಸಾವಿರ ರೂ. ನೀಡಬೇಕು. ಇಲ್ಲದಿದ್ದರೆ ಪೊಲೀಸರಿಗೆ ತಿಳಿಸುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇವೆ ಎಂದು ಬೆದರಿಸಿದ್ದರು. ‘ನಾವು ವಿದ್ಯಾರ್ಥಿಗಳು ಅಷ್ಟು ಹಣ ನಮ್ಮಲ್ಲಿಲ್ಲ ಎಂದು ಸಂತ್ರಸ್ತರು ಹೇಳಿದರೂ ಕೇಳದ ಆರೋಪಿಗಳು ಅಪ್ರಾಪ್ತೆಯ ಜತೆಗಿದ್ದ ಆಕೆ ಸ್ನೇಹಿತನ ಎಟಿಎಂ ಕಸಿದು ಹಣ ಡ್ರಾ ಮಾಡಿಕೊಂಡು ಬರಲು ಶಮೀರ್ ಹೋಗಿದ್ದ.
ಆದರೆ ಹಣ ಬರದೆ ಇದ್ದಾಗ ಕರೆ ಮಾಡಿ ಆಕೆಯ ಸ್ನೇಹಿತನನ್ನು ಬರಲು ಹೇಳಿದ್ದಾನೆ. ಈ ಸಂದರ್ಭ ನಝೀರ್ ಅಪ್ರಾಪ್ತೆಯನ್ನು ಅತ್ಯಾಚಾರ ನಡೆಸಿದ್ದ. 1 ಸಾವಿರ ರೂ. ಡ್ರಾ ಮಾಡಿಕೊಂಡು ಬಂದ ಬಳಿಕ ಶಮೀರ್ ಕೂಡಾ ಆಕೆಯನ್ನು ಅತ್ಯಾಚಾರಗೈದಿದ್ದ. ಬಳಿಕ ಈ ವಿಷಯ ಯಾರಿಗಾದರೂ ತಿಳಿಸಿದರೆ ವಿಡಿಯೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿದ್ದರು ಎಂದು ಆರೋಪಿಸಲಾಗಿದೆ. ಘಟನೆ ನಡೆದು ಒಂದು ವಾರವಾದರೂ ಸಂತ್ರಸ್ತರು ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ. ಅಪರಾಧಿಗಳು ಹಣ ನೀಡುವಂತೆ ಕರೆ ಮಾಡಿ ಮತ್ತೆ ಕಿರುಕುಳ ನೀಡಿದ್ದರು. ಕೊನೆಗೂ ಫೆ.18ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆಗಿನ ಇನ್ಸ್ಪೆಕ್ಟರ್ ಕಲಾವತಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ 15 ಸಾಕ್ಷಿದಾರರನ್ನು ಹಾಗೂ 21 ದಾಖಲೆಗಳನ್ನು ವಿಚಾರಣೆ ನಡೆಸಿದ್ದರು. ವಿಶೇಷ ಸರಕಾರಿ ಅಭಿಯೋಜಕ ವೆಂಕಟ್ರಮಣ ಸ್ವಾಮಿ ಸಿ. ಸರಕಾರದ ಪರವಾಗಿ ವಾದಿಸಿದ್ದರು.
ನಝೀರ್ ದಂಡದ ಮೊತ್ತದಲ್ಲಿ 1 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು. ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ. ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಮಂಗಳವಾರ ನೀಡಿದ ಆದೇಶದಲ್ಲಿ ತಿಳಿಸಿದೆ.
A court here has handed down 12 years of rigorous imprisonment to a youth accused of raping a college student and divesting her of the money she had with her. This incident had happened on February 9, 2019.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm