ಬ್ರೇಕಿಂಗ್ ನ್ಯೂಸ್
28-04-21 10:08 am Mangalore Correspondent ಕ್ರೈಂ
Photo credits : ungender
ಮಂಗಳೂರು, ಎ.28: ನಗರ ಹೊರ ವಲಯದ ಅರ್ಕುಳ ಗ್ರಾಮದ ಅಡ್ಯಾರ್ ಗುಡ್ಡೆ ಎಂಬಲ್ಲಿ ಎರಡು ವರ್ಷದ ಹಿಂದೆ ಅಪ್ರಾಪ್ತೆ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದಿದ್ದ ಪ್ರಮುಖ ಆರೋಪಿ ನಝೀರ್ ಎಂಬಾತನಿಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ 1.16 ಲಕ್ಷ ರೂ. ದಂಡ ವಿಧಿಸಿ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಫೋಕ್ಸೊ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಮತ್ತೋರ್ವ ಆರೋಪಿ ಶಮೀರ್ಗೆ 6 ತಿಂಗಳು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.
ಪ್ರಕರಣದ ಹಿನ್ನೆಲೆ:
2019 ಫೆ.9ರಂದು ಪ್ರಕರಣದ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಅಡ್ಯಾರ್ ಬಳಿ ಇರುವ ಗುಡ್ಡೆಯ ಕಲ್ಲು ಬಂಡೆಯ ಮೇಲೆ ಕುಳಿತಿದ್ದಾಗ ಅಲ್ಲಿಗೆ ಬಂದ ವಳಚ್ಚಿಲ್ ಪದವು ನಿವಾಸಿಗಳಾದ ನಝೀರ್ ಮತ್ತು ಶಮೀರ್ ಇಬ್ಬರ ಫೊಟೋ ತೆಗೆದು ವಿಡಿಯೋ ಮಾಡಿ ಜೋಡಿಯನ್ನು ವಿಚಾರಿಸಿದ್ದರು. ಬಳಿಕ ಫೊಟೋ, ವಿಡಿಯೋ ಡಿಲೀಟ್ ಮಾಡಲು 20 ಸಾವಿರ ರೂ. ನೀಡಬೇಕು. ಇಲ್ಲದಿದ್ದರೆ ಪೊಲೀಸರಿಗೆ ತಿಳಿಸುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇವೆ ಎಂದು ಬೆದರಿಸಿದ್ದರು. ‘ನಾವು ವಿದ್ಯಾರ್ಥಿಗಳು ಅಷ್ಟು ಹಣ ನಮ್ಮಲ್ಲಿಲ್ಲ ಎಂದು ಸಂತ್ರಸ್ತರು ಹೇಳಿದರೂ ಕೇಳದ ಆರೋಪಿಗಳು ಅಪ್ರಾಪ್ತೆಯ ಜತೆಗಿದ್ದ ಆಕೆ ಸ್ನೇಹಿತನ ಎಟಿಎಂ ಕಸಿದು ಹಣ ಡ್ರಾ ಮಾಡಿಕೊಂಡು ಬರಲು ಶಮೀರ್ ಹೋಗಿದ್ದ.
ಆದರೆ ಹಣ ಬರದೆ ಇದ್ದಾಗ ಕರೆ ಮಾಡಿ ಆಕೆಯ ಸ್ನೇಹಿತನನ್ನು ಬರಲು ಹೇಳಿದ್ದಾನೆ. ಈ ಸಂದರ್ಭ ನಝೀರ್ ಅಪ್ರಾಪ್ತೆಯನ್ನು ಅತ್ಯಾಚಾರ ನಡೆಸಿದ್ದ. 1 ಸಾವಿರ ರೂ. ಡ್ರಾ ಮಾಡಿಕೊಂಡು ಬಂದ ಬಳಿಕ ಶಮೀರ್ ಕೂಡಾ ಆಕೆಯನ್ನು ಅತ್ಯಾಚಾರಗೈದಿದ್ದ. ಬಳಿಕ ಈ ವಿಷಯ ಯಾರಿಗಾದರೂ ತಿಳಿಸಿದರೆ ವಿಡಿಯೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿದ್ದರು ಎಂದು ಆರೋಪಿಸಲಾಗಿದೆ. ಘಟನೆ ನಡೆದು ಒಂದು ವಾರವಾದರೂ ಸಂತ್ರಸ್ತರು ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ. ಅಪರಾಧಿಗಳು ಹಣ ನೀಡುವಂತೆ ಕರೆ ಮಾಡಿ ಮತ್ತೆ ಕಿರುಕುಳ ನೀಡಿದ್ದರು. ಕೊನೆಗೂ ಫೆ.18ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆಗಿನ ಇನ್ಸ್ಪೆಕ್ಟರ್ ಕಲಾವತಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ 15 ಸಾಕ್ಷಿದಾರರನ್ನು ಹಾಗೂ 21 ದಾಖಲೆಗಳನ್ನು ವಿಚಾರಣೆ ನಡೆಸಿದ್ದರು. ವಿಶೇಷ ಸರಕಾರಿ ಅಭಿಯೋಜಕ ವೆಂಕಟ್ರಮಣ ಸ್ವಾಮಿ ಸಿ. ಸರಕಾರದ ಪರವಾಗಿ ವಾದಿಸಿದ್ದರು.
ನಝೀರ್ ದಂಡದ ಮೊತ್ತದಲ್ಲಿ 1 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು. ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ. ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಮಂಗಳವಾರ ನೀಡಿದ ಆದೇಶದಲ್ಲಿ ತಿಳಿಸಿದೆ.
A court here has handed down 12 years of rigorous imprisonment to a youth accused of raping a college student and divesting her of the money she had with her. This incident had happened on February 9, 2019.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm