ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm