ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am