ಬ್ರೇಕಿಂಗ್ ನ್ಯೂಸ್
08-05-21 08:51 pm Mangaluru Correspondent ಕ್ರೈಂ
ಸುರತ್ಕಲ್, ಮೇ 8: ಅಪ್ರಾಪ್ತ ಬಾಲಕನ ವಿಡಿಯೋ ಮುಂದಿಟ್ಟು ಬೆದರಿಸಿದ್ದಲ್ಲದೆ, ಮನೆಯಿಂದ ಚಿನ್ನ ತರುವಂತೆ ಹೇಳಿ ಉಪಾಯದಿಂದ ಚಿನ್ನಾಭರಣ ಎಗರಿಸಿದ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಸುರತ್ಕಲ್ ಠಾಣೆ ವ್ಯಾಪ್ತಿ ಮಧ್ಯ ಪರಿಸರದ ದೇವಸ್ಥಾನದ ಬಳಿ ಹುಡುಗ ಸಿಗರೇಟ್ ಸೇದುತ್ತಿದ್ದುದನ್ನು ರಂಜಿತ್ ಎನ್ನುವ ವ್ಯಕ್ತಿ ಆತನಿಗೆ ತಿಳಿಯದಂತೆ ವಿಡಿಯೋ ಮಾಡಿದ್ದಾನೆ. ಬಳಿಕ ವಿಡಿಯೋವನ್ನು ಹುಡುಗನಿಗೆ ತೋರಿಸಿ, ಇದನ್ನು ನಿನ್ನ ಮನೆಯವರಿಗೆ ತೋರಿಸುವುದಾಗಿ ಬೆದರಿಸಿದ್ದಾನೆ. ಅಲ್ಲದೆ, ವಿಡಿಯೋ ಯಾರಿಗೂ ತೋರಿಸದೆ ಮುಚ್ಚಿಡಬೇಕಾದರೆ, ನೀನು ಮನೆಯಿಂದ 20 ಸಾವಿರ ಹಣವನ್ನು ತರಬೇಕೆಂದು ಒತ್ತಡ ಹೇರಿದ್ದಾನೆ.

ರಂಜಿತ್ ಒತ್ತಡಕ್ಕೆ ಬೆದರಿದ ಹುಡುಗ ಮನೆಯಲ್ಲಿ ಹೆತ್ತವರಿಗೆ ಗೊತ್ತಾಗದಂತೆ ಹಣಕ್ಕಾಗಿ ಜಾಲಾಡಿದ್ದಾನೆ. ಬಳಿಕ ಹಣ ಸಿಗದೆ, ಮನೆಯಲ್ಲಿದ್ದ ಚಿನ್ನದ ಆಭರಣವನ್ನು ಕದ್ದು ತಂದು ರಂಜಿತ್ ಕೈಗೆ ಒಪ್ಪಿಸಿದ್ದ. ರಂಜಿತ್ ಬಳಿಕ ಚಿನ್ನವನ್ನು ಫೈನಾನ್ಸ್ ಒಂದರಲ್ಲಿ ಅಡವಿಟ್ಟು ಹಣ ಪಡೆದಿದ್ದಾನೆ. ಇದೆಲ್ಲ ನಡೆದು ವಾರದ ಬಳಿಕ ಮನೆಯವರಿಗೆ ಆಭರಣ ಕಳವಾಗಿದ್ದು ಅರಿವಿಗೆ ಬಂದಿದ್ದು, ಮನೆಯಲ್ಲಿ ಹುಡುಕಾಟ ನಡೆಸಿದ್ದಾರೆ.
ಮನೆಯ ಹುಡುಗನಲ್ಲಿಯೂ ಕೇಳಿದ್ದಾರೆ. ಆದರೆ, ಆತ ತನಗೇನು ಗೊತ್ತಿಲ್ಲವೆಂದೇ ನಾಟಕ ಮಾಡಿದ್ದ. ಬಳಿಕ ಮನೆಮಂದಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಮನೆಮಗ ಏನೇನೋ ಅರ್ಧಂಬರ್ಧ ಹೇಳಿದ್ದನ್ನೂ ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಕರೆದು ವಿಚಾರಿಸಿದಾಗ, ಸತ್ಯ ವಿಷಯ ಬೆಳಕಿಗೆ ಬಂದಿದೆ. ರಂಜಿತ್ ಎನ್ನುವ ಪಕ್ಕದ ಮನೆಯ ಯುವಕನೇ ಹುಡುಗನನ್ನು ಬೆದರಿಸಿ, ಚಿನ್ನಾಭರಣ ತರುವಂತೆ ಹೇಳಿ ಮೋಸ ಮಾಡಿರುವುದು ಬಯಲಾಗಿದೆ.
ಹುಡುಗ ಚಿನ್ನ ಕದ್ದಿರುವುದು ಮತ್ತು ರಂಜಿತ್ ಅದನ್ನು ಎತ್ತಿಕೊಂಡು ಹೋಗಿ ಫೈನಾನ್ಸಲ್ಲಿ ಅಡವಿಟ್ಟಿದ್ದನ್ನು ಪೊಲೀಸರಲ್ಲಿ ಒಪ್ಪಿಕೊಂಡಿದ್ದಾರೆ. ಆದರೆ, ಎರಡೂ ಮನೆಯವರು ಅಕ್ಕಪಕ್ಕದವರಾಗಿದ್ದರಿಂದ ರಂಜಿತ್ ವಿರುದ್ಧ ಹುಡುಗನ ಮನೆಯವರು ದೂರು ನೀಡಿಲ್ಲ. ಆಭರಣ ಬಿಡಿಸಿಕೊಡುವಂತೆ ಷರತ್ತು ವಿಧಿಸಿದ್ದಾರೆ. ಸುರತ್ಕಲ್ ಪೊಲೀಸರು ರಂಜಿತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Surathkal police have detained a person in connection with the case of Blackmail and threatening a minor boy of showing his video of smoking to his parents. He was demanding him to fetch gold from his home. The detained person is identified as Ranjith.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm