ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm