ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm