ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm