ಬ್ರೇಕಿಂಗ್ ನ್ಯೂಸ್
27-08-20 11:59 am Hubali Reporter ಕ್ರೈಂ
ಹುಬ್ಬಳ್ಳಿ , ಆಗಸ್ಟ್ 27: ಧಾರವಾಡದ ರೌಡಿಶೀಟರ್ ಇರ್ಫಾನ್ ಹಂಚಿನಾಳ ಅಲಿಯಾಸ್ ಫ್ರೂಟ್ ಇರ್ಫಾನ್ ಹತ್ಯೆಗೆ ಸುಪಾರಿ ನೀಡಿದ್ದ ವ್ಯಕ್ತಿ ಸಮೇತ ಮೂವರು ಶೂಟರ್ಸ್ ಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶ್ವಸಿಯಾಗಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಜ್ ಹೊಟೇಲ್ ಎದುರು ಆಗಸ್ಟ್ 7ರಂದು ನಡೆದಿದ್ದ ಕೊಲೆಯ ರೂವಾರಿಗಳ ಹುಡುಕಾಟಕ್ಕೆ ಪೊಲೀಸರು ನಿರಂತರವಾಗಿ ಪ್ರಯತ್ನ ಮಾಡಿದ್ದು, ಸದ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಾಂಬೆಯಿಂದ ಕರೆ ತಂದಿರುವ ಮೂವರು ಆರೋಪಿಗಳಾದ ನೀಲೇಶ ಗೋವಿಂದ ನಾಡಗಾಂವಕರ್, ಸುನೀಲ ಬನಸೂಡೆ ಅಲಿಯಾಸ್ ಮಾಮಾ ದೇವರಾಂ ಬನಾವುರಿ ಹಾಗೂ ನವನಾಥ ಅರ್ಜುನ ಡೋಲಾಸ್ ಎಂದು ಗುರುತಿಸಲಾಗಿದೆ. ಇವರಿಗೆ ಸುಪಾರಿ ನೀಡಿದ್ದ ವ್ಯಕ್ತಿಯನ್ನು ರಾಜೇಂದ್ರಸಿಂಗ್ ಮೋಹನಸಿಂಗ್ ರಾಹುತ್ ಅಲಿಯಾಸ್ ರಾಜು ನೇಪಾಳಿ ಎಂದು ಗುರುತಿಸಲಾಗಿದೆ.
ಬಂಧಿತ ಮೂವರು ಆರೋಪಿಗಳು ಹಣಕ್ಕಾಗಿ ರೌಡಿಶೀಟರ್ ಇರ್ಫಾನ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದರು. ಅವರನ್ನು ಮುಂಬೈ ಪೊಲೀಸರ ಸಹಾಯದಿಂದ ಹುಬ್ಬಳ್ಳಿ ಪೊಲೀಸರು ಬಂಧಿಸಿ ಇದೀಗ ಹುಬ್ಬಳ್ಳಿಗೆ ಕರೆತಂದಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಮೈಸೂರು ಜೈಲಿನಲ್ಲಿರುವ ಭೂಗತ ಪಾತಕಿ ಬಚ್ಚಾಖಾನ ಹೆಸರು ಸಹ ತಳಕು ಹಾಕಿಕೊಂಡಿದ್ದು ಬಚ್ಚಾಖಾನನ ಪಾತ್ರದ ಬಗ್ಗೆಯೂ ಸಹ ಪೊಲೀಸರು ವಿಚಾರಣೆ ನಡೆಸಲು ಇದೀಗ ಮುಂದಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿ-ಧಾರವಾಡ ಮೂಲದ ಸಾಫ್ಟ್ ವೇರ್ ಅನಲೈಸರ್ ಆಗಿದ್ದ ಧಾರವಾಡ ಮಣಕಿಲ್ಲಾ ನಿವಾಸಿ ಅಫ್ತಾಬ ಮಹಮ್ಮದಲಿ ಬೇಪಾರಿ, ಸ್ಕ್ರ್ಯಾಪ್ ವ್ಯವಹಾರ ಮಾಡುತ್ತಿದ್ದ ಧಾರವಾಡ ಶೇಖ ಕಂಪೌಂಡ್ ಮಾಳಾಪುರ ನಿವಾಸಿ ತೌಸೀಫ ಸಾಧಿಕ ನಿಪ್ಪಾಣಿ, ಧಾರವಾಡ ಮೆಣಸಿನಕಾಯಿ ಓಣಿ ಮದಾರಮಡ್ಡಿಯ ವಿದ್ಯಾರ್ಥಿ ಅತಿಯಾಬಖಾನ ಅಮಾನುಲ್ಲಾಖಾನ ತಡಕೋಡ, ಇಸ್ಲಾಂಪೂರ ರಸ್ತೆ ಹಳೇ ಹುಬ್ಬಳ್ಳಿ ನಿವಾಸಿ ವಿದ್ಯಾರ್ಥಿ ಅಮೀರ ಮಹಮ್ಮದಶಫಿ ತಮಟಗಾರ ಹಾಗೂ ಲಾರಿ ವ್ಯವಹಾರ ಮಾಡುತ್ತಿರುವ ಧಾರವಾಡದ ಬಡಿಗೇರ ಓಣಿ ಮದಿಹಾಳ ನಿವಾಸಿ ಮೋಹಿನ್ ದಾದಾಸಾಬ ಪಟೇಲ ಸೇರಿದಂತೆ ಮೈಸೂರಿನ ಶಹಜಾನ್ ಮತ್ತು ಸೈಯದ್ ಸೋಹೈಲ್ ಎಂಬ ಏಳು ಜನರನ್ನು ಬಂಧನ ಮಾಡಲಾಗಿದ್ದು, ಗುಂಡಿನ ದಾಳಿ ಪ್ರಕರಣದಲ್ಲಿ ಒಟ್ಟು ಹತ್ತು ಜನರ ಬಂಧನವಾಗಿದೆ. ಘಟನೆಯ ಕುರಿತು ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm