ಬ್ರೇಕಿಂಗ್ ನ್ಯೂಸ್
21-05-21 11:10 am Udupi Correspondent ಕ್ರೈಂ
Photo credits : Representative Image
ಕಾರ್ಕಳ, ಮೇ 21: ವ್ಯಕ್ತಿಯೊಬ್ಬರು ತನ್ನ ಮನೆಯ ವೆರಾಂಡಾದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ಲಾಲು ಹಾದಿಯಂಗಡಿ ನಿವಾಸಿ ಆನಂದ್ ಶೇರ್ವೆಗಾರ್ (63) ಮೃತ ವ್ಯಕ್ತಿಯಾಗಿದ್ದು, ಮೇ 19ರಂದು ರಾತ್ರಿ ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆನಂದ್ ಶೇರ್ವೆಗಾರ್ ತನ್ನ ಮಕ್ಕಳು ಮತ್ತು ಪತ್ನಿಯಿಂದ ಬೇರೆಯಾಗಿದ್ದು, ತನಗೆ ಸೇರಿದಗದ ನಾಲ್ಕು ಎಕ್ರೆ ಜಾಗವನ್ನು ಬೆಂಗಳೂರಿನಲ್ಲಿರುವ ಗಣೇಶ್ ರಾವ್ ಮತ್ತು ಮೂವರಿಗೆ ಮಾರಾಟ ಮಾಡಿದ್ದಾರೆ.
ಹಾಗಿದ್ದರೂ, ಜಾಗ ಖರೀದಿಸಿದ ವ್ಯಕ್ತಿಗಳ ಅನುಮತಿ ಪಡೆದು ಅದೇ ಜಾಗದ ಮೂಲೆಯಲ್ಲಿ ಅವರ ಸಂಬಂಧಿಕರ ಮನೆಯ ಪಕ್ಕದಲ್ಲಿ ಸಣ್ಣ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ನೆಲೆಸಿದ್ದರು. ಒಬ್ಬಂಟಿಯಾಗಿದ್ದ ಆನಂದ್ ಅವರಿಗೆ ದೀನಸಿ ಸಾಮಗ್ರಿ ತಂದುಕೊಡುವುದು ಮತ್ತು ಇತರ ಕೆಲಸಗಳನ್ನು ಮಾಡಿಕೊಡುವುದಕ್ಕಾಗಿ ಅವರ ಅಕ್ಕನ ಮಗ ಹರೀಶ್ ಎಂಬಾತ ಬರುತ್ತಿದ್ದ. ಕೆಲವೊಮ್ಮೆ ಇಬ್ಬರೂ ಮನೆಯಲ್ಲಿ ಕುಳಿತು ಕುಡಿಯುವ ಚಟವನ್ನೂ ಬೆಳೆಸಿಕೊಂಡಿದ್ದರು ಎನ್ನಲಾಗಿದೆ.
ಮೊನ್ನೆ ರಾತ್ರಿಯೂ ಹರೀಶ್ ಮನೆಗೆ ಬಂದಿದ್ದು, ಸಂಜೆ ಹೊತ್ತಿಗೆ ಕೆಲಸ ಮುಗಿಸಿ ತೆರಳಿದ್ದ. ರಾತ್ರಿ ವೇಳೆಗೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಏನೋ ಜಗಳ ಆಗಿರಬೇಕೆಂದು ಸ್ಥಳೀಯರು ಸಂಶಯಿಸಿದ್ದಾರೆ. ಇದರ ಪರಿಣಾಮ ಕೊಲೆ ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The mortal remains of Shirlalu Hadiangadi Anand Shervegar (63) were found on the verandah of the house, where he used to reside alone, on the late-night of May 19. It is suspected that he is murdered.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm