ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm