ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm