ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am