ಬ್ರೇಕಿಂಗ್ ನ್ಯೂಸ್
26-05-21 01:15 pm Headline Karnataka News Network ಕ್ರೈಂ
ಪಾಟ್ನಾ, ಮೇ 26 : ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ.
ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ನೇತು ಹಾಕಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಕ್ಷಣವೇ ಆಕೆಯನ್ನ ಚಿಕಿತ್ಸೆಗೋಸ್ಕರ ಸದರ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಈಗಾಗಲೇ ಆರು ಜನರ ಬಂಧನ ಮಾಡಿದ್ದು, ಅವರನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಸಂತ್ರಸ್ತೆಯ ಮನೆಯಲ್ಲಿ ವಿವಾಹ ಸಮಾರಂಭವಿತ್ತು. ಇದೇ ಕಾರ್ಯದಲ್ಲಿ ಎಲ್ಲರೂ ಮಗ್ನರಾಗಿದ್ದರು. ಅಡುಗೆ ಸೇರಿದಂತೆ ಇತರೆ ಕೆಲಸ ಮಾಡಲು ಕೆಲ ಕಾರ್ಮಿಕರು ಇಲ್ಲಿಗೆ ಆಗಮಿಸಿದ್ದರು.
ಬೆಳಗ್ಗೆ ಮನೆಯ ಸೊಸೆ ಶೌಚಾಲಯಕ್ಕಾಗಿ ಹೊರಗಡೆ ಹೋಗಿದ್ದಾಳೆ. ಇದೇ ವೇಳೆ ಕಾರ್ಮಿಕರು ಆಕೆಯನ್ನ ಹಿಂಬಾಲಿಸಿ ಅತ್ಯಾಚಾರವೆಸಗಿದ್ದಾರೆ. ಜತೆಗೆ ಆಕೆಯ ಕೊರಳಲ್ಲಿದ್ದ ಆಭರಣ ದೋಚಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman was Gang-raped and later has been hanged to the electric police Naked in Bihar.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm