ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.

ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 07:22 pm
HK News Staffer
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm