ಬ್ರೇಕಿಂಗ್ ನ್ಯೂಸ್
02-06-21 12:29 pm Bangalore Correspondent ಕ್ರೈಂ
ಬೆಂಗಳೂರು, ಜೂ. 02: ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.
ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ: ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
ಬೆಂಗಳೂರು ಅತ್ಯಾಚಾರ ಕೇಸ್ ; ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm