ಬ್ರೇಕಿಂಗ್ ನ್ಯೂಸ್
02-06-21 12:29 pm Bangalore Correspondent ಕ್ರೈಂ
ಬೆಂಗಳೂರು, ಜೂ. 02: ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.


ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ: ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
ಬೆಂಗಳೂರು ಅತ್ಯಾಚಾರ ಕೇಸ್ ; ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am