ಬ್ರೇಕಿಂಗ್ ನ್ಯೂಸ್
02-06-21 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಬಗ್ಗೆ ಅವಹೇಳನಕಾರಿ ಸಂದೇಶ ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಸುಳ್ಯ ತಾಲೂಕಿನ ದುಗ್ಗಲಡ್ಕ ನಿವಾಸಿ ಭವಾನಿಶಂಕರ್(32), ಬಜಾಲ್ ನಿವಾಸಿ ನೌಶಾದ್ (27), ಕಾವೂರು ನಿವಾಸಿ ರವಿ ಅಲಿಯಾಸ್ ಟಿಕ್ಕಿ ರವಿ(38), ಮೂಡುಬಿದ್ರೆ ಧರೆಗುಡ್ಡೆ ನಿವಾಸಿ ಜಯ ಕುಮಾರ್ (33) ಬಂಧಿತರು. ಶರಣ್ ಪಂಪ್ವೆಲ್, ದುರ್ಗಾವಾಹಿನಿ ಮಹಿಳಾ ಸಂಘಟನೆಯ ಯುವತಿಯರನ್ನು ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದಾರೆಂದು ಬಿಂಬಿಸಿ ವಾಟ್ಸಪ್ ಮೆಸೇಜ್ ಹರಿದಾಡಿತ್ತು. ಶರಣ್ ಪಂಪ್ವೆಲ್ ಜೊತೆಗೆ ಯುವತಿಯೊಬ್ಬಳು ಚಾಟ್ ಮಾಡುತ್ತಿರುವ ರೀತಿಯ ವಾಟ್ಸಪ್ ಸ್ಕ್ರೀನ್ ಶಾಟ್ ಕೂಡ ಹರಿದಾಡಿದ್ದು ಅದನ್ನು ಭಾರೀ ವೈರಲ್ ಮಾಡಲಾಗಿತ್ತು.


ಈ ಬಗ್ಗೆ ದುರ್ಗಾವಾಹಿನಿ ಮಹಿಳಾ ಸಂಘಟನೆಯ ಸದಸ್ಯರು ಮಂಗಳೂರು ಪೂರ್ವ ಠಾಣೆಗೆ ದೂರು ನೀಡಿದ್ದರು. ಈ ಮೆಸೇಜನ್ನು ಅತಿ ಹೆಚ್ಚು ಗ್ರೂಪುಗಳಿಗೆ ಫಾರ್ವರ್ಡ್ ಮಾಡಿ, ಶರಣ್ ಪಂಪ್ವೆಲ್ ಹೆಸರಿಗೆ ಕಳಂಕ ತರುವ ರೀತಿ ಬಿಂಬಿಸಿದ ಆರೋಪದಲ್ಲಿ ನಾಲ್ವರು ಯುವಕರನ್ನು ಬಂಧಿಸಲಾಗಿದೆ. ಆದರೆ, ಈ ಸ್ಕ್ರೀನ್ ಶಾಟ್ ಮೆಸೇಜನ್ನು ಯಾರು ಕ್ರಿಯೇಟ್ ಮಾಡಿದ್ದರು ಮತ್ತು ಅದು ಎಷ್ಟು ಸಾಚಾತನದ್ದು ಎನ್ನುವ ಬಗ್ಗೆ ತಾಂತ್ರಿಕ ಪರಿಣತರು ನಿರ್ಧರಿಸಲಿದ್ದಾರೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಐದಾರು ದಿನಗಳ ಹಿಂದೆ ಶರಣ್ ಪಂಪ್ವೆಲ್ ಹೆಸರಲ್ಲಿದ್ದ ವಾಟ್ಸಪ್ ಮೆಸೇಜ್ ಭಾರೀ ವೈರಲ್ ಆಗಿದ್ದಲ್ಲದೆ, ಅದನ್ನು ಹಿಂದು ಸಂಘಟನೆಗಳ ವಿರೋಧಿಗಳು ಸೇರಿ ವೈರಲ್ ಮಾಡಿದ್ದರು ಅನ್ನೋ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸ್ವತಃ ಶರಣ್ ಬಳಿ ಕೇಳಿದಾಗ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಇದನ್ನು ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲು ಆಗ್ರಹ ಮಾಡಿದ್ದೇವೆ ಎಂದು ತಿಳಿಸಿದ್ದರು. ಬಂಧಿತ ಆರೋಪಿಗಳು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಕಾಂಗ್ರೆಸ್ ಮುಖಂಡರೇ ಬೇಲ್ ಕೊಡಿಸಿದ್ದಾರೆಂದು ಹೇಳಲಾಗುತ್ತಿದೆ.
Mangalore Police have arrested four people for allegedly posting derogatory messages against Durga Vahini and Vishwa Hindu Parishad (VHP) leader Sharan Pumpwell on social media. Durga Vahini is the women's wing of the VHP. The four were taken into custody on Tuesday, June 1.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am