ಬ್ರೇಕಿಂಗ್ ನ್ಯೂಸ್
02-06-21 03:22 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: 20 ವರ್ಷದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಲ್ಲದೆ, ರೌಡಿಗಳನ್ನು ಕಟ್ಟಿಕೊಂಡು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.


ಮಂಗಳೂರು ನಗರದ ಶಕ್ತಿನಗರದ ಬಳಿಯ ಪ್ರೀತಿ ನಗರದ ಯುವತಿಯನ್ನು ಹೇಮಂತ್ ಎಂಬಾತ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದು, ಇದನ್ನು ಅರಿತ ಆಕೆಯ ಸೋದರರು ಹೇಮಂತನಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದರು. ತಂಗಿಯ ವಿಚಾರಕ್ಕೆ ಬರದೆ ದೂರ ಇರುವಂತೆ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಹೇಮಂತ್, ಮೇ 30ರಂದು ರಾತ್ರಿ ಎಂಟು ಗಂಟೆಗೆ ಏಳೆಂಟು ಮಂದಿ ರೌಡಿಗಳೊಂದಿಗೆ ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.





ಈ ಸಂದರ್ಭ ಯುವತಿಯ ಸೋದರರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿದ್ದ ತಾಯಿಯನ್ನು ಬೈದಾಡಿದ್ದಲ್ಲದೆ, ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎನ್ನುತ್ತಾ ತಲವಾರು ಮತ್ತು ರಾಡಿನಿಂದ ಮನೆಯಲ್ಲಿದ್ದ ಟಿವಿ, ಸೋಫಾ, ಮಿಕ್ಸಿಗಳಿಗೆ ಹಾನಿ ಮಾಡಿದ್ದಾರೆ. ಬಳಿಕ ತಾಯಿ ಮನೆಯ ಹಿಂಬಾಗಿಲಿನಿಂದ ಹೊರಬಂದು ಬೊಬ್ಬೆ ಹಾಕಿದ್ದು, ಸ್ಥಳೀಯರು ಸೇರುವಷ್ಟರಲ್ಲಿ ಆಗಂತುಕರು ತಾವು ಬಂದಿದ್ದ ಬೈಕ್, ಸ್ಕೂಟರಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಪ್ರಕರಣ ದಾಖಲಾಗಿತ್ತು.



ಪೊಲೀಸರು ಕೋಡಿಕಲ್ ನಿವಾಸಿ, ಉರ್ವಾ ಠಾಣೆಯ ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಮೂಲತಃ ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂಬವರನ್ನು ಬಂಧಿಸಿದ್ದಾರೆ. ಈ ಪೈಕಿ ರಂಜಿತ್ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಉರ್ವಾದಲ್ಲಿ ಒಂಬತ್ತು ಪ್ರಕರಣ ಮತ್ತು ಕಾವೂರಿನಲ್ಲಿ ಒಂದು ಪ್ರಕರಣ ಎದುರಿಸುತ್ತಿದ್ದಾನೆ. ಅವಿನಾಶ್ ಕೂಡ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಎರಡು ಪ್ರಕರಣ ದಾಖಲಾಗಿದೆ.
Seven accused were arrested regarding the incident where a gang reportedly came armed with lethal weapons, tried to kill a woman, and vandalized her house in Shakthinagar in Mangalore.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am