ಬ್ರೇಕಿಂಗ್ ನ್ಯೂಸ್
02-06-21 03:22 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: 20 ವರ್ಷದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಲ್ಲದೆ, ರೌಡಿಗಳನ್ನು ಕಟ್ಟಿಕೊಂಡು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
ಮಂಗಳೂರು ನಗರದ ಶಕ್ತಿನಗರದ ಬಳಿಯ ಪ್ರೀತಿ ನಗರದ ಯುವತಿಯನ್ನು ಹೇಮಂತ್ ಎಂಬಾತ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದು, ಇದನ್ನು ಅರಿತ ಆಕೆಯ ಸೋದರರು ಹೇಮಂತನಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದರು. ತಂಗಿಯ ವಿಚಾರಕ್ಕೆ ಬರದೆ ದೂರ ಇರುವಂತೆ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಹೇಮಂತ್, ಮೇ 30ರಂದು ರಾತ್ರಿ ಎಂಟು ಗಂಟೆಗೆ ಏಳೆಂಟು ಮಂದಿ ರೌಡಿಗಳೊಂದಿಗೆ ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಈ ಸಂದರ್ಭ ಯುವತಿಯ ಸೋದರರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿದ್ದ ತಾಯಿಯನ್ನು ಬೈದಾಡಿದ್ದಲ್ಲದೆ, ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎನ್ನುತ್ತಾ ತಲವಾರು ಮತ್ತು ರಾಡಿನಿಂದ ಮನೆಯಲ್ಲಿದ್ದ ಟಿವಿ, ಸೋಫಾ, ಮಿಕ್ಸಿಗಳಿಗೆ ಹಾನಿ ಮಾಡಿದ್ದಾರೆ. ಬಳಿಕ ತಾಯಿ ಮನೆಯ ಹಿಂಬಾಗಿಲಿನಿಂದ ಹೊರಬಂದು ಬೊಬ್ಬೆ ಹಾಕಿದ್ದು, ಸ್ಥಳೀಯರು ಸೇರುವಷ್ಟರಲ್ಲಿ ಆಗಂತುಕರು ತಾವು ಬಂದಿದ್ದ ಬೈಕ್, ಸ್ಕೂಟರಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಪ್ರಕರಣ ದಾಖಲಾಗಿತ್ತು.
ಪೊಲೀಸರು ಕೋಡಿಕಲ್ ನಿವಾಸಿ, ಉರ್ವಾ ಠಾಣೆಯ ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಮೂಲತಃ ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂಬವರನ್ನು ಬಂಧಿಸಿದ್ದಾರೆ. ಈ ಪೈಕಿ ರಂಜಿತ್ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಉರ್ವಾದಲ್ಲಿ ಒಂಬತ್ತು ಪ್ರಕರಣ ಮತ್ತು ಕಾವೂರಿನಲ್ಲಿ ಒಂದು ಪ್ರಕರಣ ಎದುರಿಸುತ್ತಿದ್ದಾನೆ. ಅವಿನಾಶ್ ಕೂಡ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಎರಡು ಪ್ರಕರಣ ದಾಖಲಾಗಿದೆ.
Seven accused were arrested regarding the incident where a gang reportedly came armed with lethal weapons, tried to kill a woman, and vandalized her house in Shakthinagar in Mangalore.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm