ಬ್ರೇಕಿಂಗ್ ನ್ಯೂಸ್
03-06-21 01:41 pm Headline Karnataka News Network ಕ್ರೈಂ
Photo credits : News18
ಕೋಟಾ, ಜೂ.3: ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮೃತದೇಹವನ್ನು ರಸ್ತೆಯಲ್ಲಿ ಸುಮಾರು 70-80 ಮೀಟರ್ ಎಳೆದುಕೊಂಡು ಹೋದ ಪೈಶಾಚಿಕ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಿಂದ ವರದಿಯಾಗಿದೆ. ಮಹಿಳೆಯ ಜತೆಗಿದ್ದ ಹಸುಗೂಸು ಕೂಡಾ ತಂದೆಯ ಕ್ರೌರ್ಯದಿಂದ ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಆರೋಪಿಯನ್ನು ಸುನೀಲ್ ವಾಲ್ಮೀಕಿ (40) ಅಲಿಯಾಸ್ ಪಿಂಟೂ ಎಂದು ಗುರುತಿಸಲಾಗಿದೆ. ಆರೋಪಿ ರಾಂಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ಡಿವೈಎಸ್ಪಿ ಹೇಳಿಕೆ ನೀಡಿದ್ದಾರೆ. ಆದರೆ ಶರಣಾಗಲು ಠಾಣೆಯತ್ತ ಹೋಗುತ್ತಿದ್ದ ಆರೋಪಿ ಪಲಾಯನ ಮಾಡಿದ್ದಾನೆ ಎಂದು ಠಾಣಾಧಿಕಾರಿ ಹಂಸರಾಜ್ ಮೀನಾ ಸ್ಪಷ್ಟಪಡಿಸಿದ್ದಾರೆ.

ಪತ್ನಿ ಸೀಮಾಳನ್ನು ಮಂಗಳವಾರ ಮಧ್ಯಾಹ್ನ ಆಕೆಯ ಸಹೋದರನ ಮನೆಯಿಂದ ಆರೋಪಿ ಕರೆದುಕೊಂಡುಬಂದಿದ್ದ ಎನ್ನಲಾಗಿದೆ. ದಂಪತಿಯ ಒಂಭತ್ತು ವರ್ಷದ ಮಗ ಅಜ್ಜಿ ಮನೆಯಲ್ಲಿ ಉಳಿದಿದ್ದ. ಸಂಜೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಆರೋಪಿ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ. ಬಳಿಕ ರಸ್ತೆಯಲ್ಲಿ 70-80 ಕಿಲೋಮೀಟರ್ ದೂರವರೆಗೆ ಪತ್ನಿಯ ಮೃತದೇಹವನ್ನು ಎಳೆದಾಡಿಕೊಂಡು ಬಂದಿದ್ದನ್ನು ನೋಡಿ ಜನ ಭೀತಿಗೊಂಡರು ಎಂದು ಠಾಣಾಧಿಕಾರಿ ವಿವರಿಸಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಪುಟ್ಟ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 15 ವರ್ಷ ಹಿಂದೆ ಸೀಮಾಳನ್ನು ವಿವಾಹವಾಗಿದ್ದ ಈತನಿಗೆ ಇಬ್ಬರು ಗಂಡುಮಕ್ಕಳಿದ್ದರು.
Chaos erupted in the Rampura area of Kota city in Rajasthan after a man was seen dragging the body of his deceased wife outside their house after allegedly killing her with an ax on Tuesday. He later arrived at the Rampura police station with the blood-dripping weapon and admitted his crime. He has been arrested.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 07:22 pm
HK News Staffer
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm