ಬ್ರೇಕಿಂಗ್ ನ್ಯೂಸ್
06-06-21 12:32 pm Udupi Correspondent ಕ್ರೈಂ
ಕುಂದಾಪುರ, ಜೂ.6: ಕೊಳವೆ ಬಾವಿಗೆ ಅನುಮತಿ ನೀಡದ ದ್ವೇಷದಲ್ಲಿ ವ್ಯಕ್ತಿಯೊಬ್ಬನನ್ನು ಗ್ರಾಪಂ ಅಧ್ಯಕ್ಷನೇ ಕಾರು ಡಿಕ್ಕಿಯಾಗಿಸಿ ಕೊಲೆಗೈದ ಘಟನೆ ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ನಡೆದಿದೆ.
ಹೊಸಬಾಳು ನಿವಾಸಿ ಉದಯ ಗಾಣಿಗ (40) ಕೊಲೆಯಾದ ವ್ಯಕ್ತಿ. ಮೃತರ ಪತ್ನಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೋರ್ವೆಲ್ ಪರಾವನಿಗೆ ನೀಡುವ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿತ್ತು. ಇದೇ ದ್ವೇಷದಲ್ಲಿ ಪ್ರಾಣೇಶ್ ಯಡಿಯಾಳ ತನ್ನ ಕಾರು ಚಲಾಯಿಸುತ್ತಿದ್ದ ವೇಳೆ ಅಡ್ಡಸಿಕ್ಕಿದ ಉದಯ ಗಾಣಿಗ ಅವರ ಬೈಕಿಗೆ ಡಿಕ್ಕಿಯಾಗಿಸಿ ಕೊಲೆಗೈದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶನಿವಾರ ರಾತ್ರಿ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಉದಯ ಗಾಣಿಗ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಈ ವೇಳೆ ಆರೋಪಿ ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದ. ಬಳಿಕ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ ಇತರ ಅಧಿಕಾರಿಗಳು ತೆರಳಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಉದಯ ಗಾಣಿಗ ಜಡ್ಕಲ್ನಲ್ಲಿ ಕೃಷಿ ಕೇಂದ್ರವನ್ನು ಹೊಂದಿದ್ದು ಬೋರ್ ವೆಲ್ ಅನುಮತಿ ನೀಡುವ ಜವಾಬ್ದಾರಿ ಹೊಂದಿದ್ದರು.
ಮೃತರು ಪತ್ನಿ, ಎರಡು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a 40-year-old social activist was found dead in a suspicious manner after a car ran over him at Yadamoge under the Shankaranarayana Police station limits on Saturday, June 5 night.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm