ಬ್ರೇಕಿಂಗ್ ನ್ಯೂಸ್
14-06-21 05:35 pm Mangalore Correspondent ಕ್ರೈಂ
ಭಟ್ಕಳ, ಜೂನ್ 14; ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿಸಿ ಪರಿವರ್ತಿಸಿದ ಪ್ರಕರಣ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳದ ನವಾಯತ್ ಕಾಲನಿಯ ನಿಸಾರ್ ಮಹಮ್ಮದ್ ಮುಕ್ತೇಸರ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿಸಿ ದೂರಸಂಪರ್ಕ ಇಲಾಖೆಯನ್ನು ವಂಚಿಸುತ್ತಿತ್ತು.
ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬ ಇಬ್ಬರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ತಿಳಿದು ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಸಿಮ್ ಕಾರ್ಡ್ಗಳನ್ನು ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೊರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾಕಿಸ್ತಾನ, ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದರು.
Bhatkal One arrested for an international telephone exchange racket. Bengaluru CCB police have come to Bhatkal to arrest the accused who have been identified as Mohammed Mukthesara.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm