ಬ್ರೇಕಿಂಗ್ ನ್ಯೂಸ್
18-06-21 08:07 pm Mangaluru Correspondent ಕ್ರೈಂ
ಮಂಗಳೂರು, ಜೂನ್ 18: ತುಳುನಾಡಿನ ಬಾವುಟವನ್ನು ಚಪ್ಪಲಿಯ ಬಣ್ಣಕ್ಕೆ ಹೊಂದಿಕೆಯಾಗುವಂತೆ ಎಡಿಟ್ ಮಾಡಿ, ಫೇಸ್ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಬರ್ಕೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಸೂರ್ಯ ಎನ್.ಕೆ. (19) ಬಂಧಿತ ಆರೋಪಿ. ತುಳುನಾಡಿನ ಬಾವುಟವನ್ನು ಎಡಿಟ್ ಮಾಡಿ, ತನ್ನ ಫೇಸ್ಬುಕ್ ನಲ್ಲಿ ಹಾಕಿದ್ದಲ್ಲದೆ ಅಶ್ಲೀಲವಾಗಿ ಕಮೆಂಟ್ ಹಾಕಿದ್ದ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಶಶಿಧರ ಹೆಗ್ಡೆ ಪೊಲೀಸರಿಗೆ ದೂರು ನೀಡಿದ್ದರು.
ಬರ್ಕೆ ಠಾಣೆಯಲ್ಲಿ ಈ ಬಗ್ಗೆ ಪೊಲೀಸರು 153(ಎ) ಮತ್ತು 505 (2) ಐಪಿಸಿ ಅಡಿ ಪ್ರಕರಣ ದಾಖಲಿಸಿದ್ದರು. ಆರೋಪಿಯ ಪತ್ತೆಗಾಗಿ ಬರ್ಕೆ ಠಾಣೆ ಎಸ್ಐ ಹಾರುಣ್ ಅಖ್ತರ್ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆ ಸಿಬಂದಿ ಪುಷ್ಪರಾಜ್, ಪ್ರಕಾಶ್, ಬರ್ಕೆ ಠಾಣೆಯ ಶರತ್ ಎಂಬವರನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ, ಆರೋಪಿಯ ಮನೆಯನ್ನು ಪತ್ತೆ ಮಾಡಿದೆ. ಆರೋಪಿ ಸೂರ್ಯ ಎನ್.ಕೆ. ಶ್ರೀರಾಂಪುರದಲ್ಲಿ ಒಂದನೇ ಕ್ರಾಸ್ ನಿವಾಸಿಯಾಗಿದ್ದನ್ನು ಪತ್ತೆ ಮಾಡಿ, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ಇಂದು ಮಂಗಳೂರಿಗೆ ಕರೆತಂದು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ತುಳುವರು ಕಳೆದ ಭಾನುವಾರ ಟ್ವಿಟರ್ ನಲ್ಲಿ ಅಭಿಯಾನ ನಡೆಸಿದ್ದು, ತುಳು ಭಾಷೆಗೆ ರಾಜ್ಯಭಾಷೆಯ ಮಾನ್ಯತೆ ನೀಡುವಂತೆ ಒತ್ತಾಯ ಮಾಡಿದ್ದರು. ಈ ವೇಳೆ, ಸಾಮಾಜಿಕ ಜಾಲತಾಣದಲ್ಲಿ ತುಳು ಟ್ವೀಟ್ ಭಾರೀ ಟ್ರೆಂಡ್ ಆಗಿತ್ತು. ಇದೇ ವೇಳೆ, ಸೂರ್ಯ ತುಳುವರನ್ನು ಕೆರಳಿಸುವುದಕ್ಕಾಗಿ ತುಳು ಬಾವುಟವನ್ನು ಚಪ್ಪಲಿಗೆ ಹೊಂದಿಸಿ, ಪೋಸ್ಟ್ ಮಾಡಿದ್ದಲ್ಲದೆ, ಇವತ್ತು ತುಳುನಾಡ್ ಚಪ್ಪಲಿ ಬಂದಿದೆ, ನಾಳೆ ಬಿಕಿನಿಯೂ ಬರಬಹುದು, ಹಾಕಿಕೊಂಡು ಮಜಾ ಮಾಡಿ ಎಂದು ಬರೆದು ತುಳು ಭಾಷಿಕರ ಭಾವನೆಗೆ ಘಾಸಿಗೊಳಿಸುವ ಕೆಲಸ ಮಾಡಿದ್ದ. ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
The Mangalore City Polie have arrested a man accused of insulting the Tulu Nadu flag through a Facebook post recently. His post had gone viral on social media. The arrested has been identified as Surya NK.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm