ಬ್ರೇಕಿಂಗ್ ನ್ಯೂಸ್
19-06-21 02:12 pm Headline Karnataka News Network ಕ್ರೈಂ
ಮಂಡ್ಯ, ಜೂನ್ 19: ಮುಖ್ಯಮಂತ್ರಿ ಯಡ್ಡಿಯೂರಪ್ಪ ಅವರ ಪಿಎ ಅಂತ ಹೇಳಿಕೊಂಡು ಯುವಕನೊಬ್ಬ ಧರ್ಮಸ್ಥಳದ ಕೆಎಸ್ಆರ್ಟಿಸಿ ಚಾಲಕನಿಂದ ಹಣ ಪಡೆದು ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಧರ್ಮಸ್ಥಳ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಬಸ್ ಚಾಲಕನಾಗಿರುವ, ಮಂಡ್ಯ ಜಿಲ್ಲೆಯ ಕೀಲಾರ ಗ್ರಾಮದ ಪುರುಷೋತ್ತಮ್ ಎಂಬಾತ ವಂಚನೆಗೊಳಗಾದ ವ್ಯಕ್ತಿ. ಧರ್ಮಸ್ಥಳ ಡಿಪೋದಲ್ಲಿ ಚಾಲಕನಾಗಿದ್ದ ವೇಳೆ ಶೈಲೇಶ್ ಎಂಬ ಯುವಕ ಪರಿಚಯವಾಗಿದ್ದ. ಧರ್ಮಸ್ಥಳದ ಹೋಟೆಲ್ ಒಂದರಲ್ಲಿ ಪರಿಚಯವಾಗಿದ್ದು ಸಿಎಂ ಯಡ್ಡಿಯೂರಪ್ಪ ನನಗೆ ತುಂಬಾ ಹತ್ತಿರದವರು ಅಂತ ತನ್ನ ಮೊಬೈಲಿನಲ್ಲಿ ಫೋಟೋ ತೋರಿಸಿ ನಂಬಿಸಿದ್ದಾನೆ. ಅಲ್ಲದೆ, ಯಡ್ಡಿಯೂರಪ್ಪ ಚುನಾವಣೆ ಸಂದರ್ಭ ಹಣ ಹಂಚಲು ನನಗೇ ಹಣ ಕೊಟ್ಟಿದ್ದರು ಅಂತ ಕಂತೆ ಕಂತೆ ನೋಟಿನ ಫೋಟೋವನ್ನೂ ತೋರಿಸಿ ಶೈಲೇಶ್ ನಂಬಿಕೆ ಹುಟ್ಟಿಸಿದ್ದಾನೆ. ಮುಖ್ಯಮಂತ್ರಿ ಬಳಿ ಹೇಳಿಸಿ ಏನು ಬೇಕಾದ್ರೂ ಕೆಲಸ ಮಾಡಿಸ್ತೀನಿ ಅಂತ ಹೇಳಿದ್ದಾನೆ.

ಇದನ್ನು ನಂಬಿದ ಚಾಲಕ ಪುರುಷೋತ್ತಮ್, ತನ್ನನ್ನು ಧರ್ಮಸ್ಥಳ ಡಿಪೋದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಿಸಲು ಹೇಳಿದ್ದಾನೆ. ನಿನ್ನ ಕೆಲಸ ಮಾಡಿಕೊಡುವುದಾಗಿ ಹೇಳಿದ ಶೈಲೇಶ್, ಅದಕ್ಕೆ ಅಧಿಕಾರಿಗಳಿಗೆ ಒಂದಿಷ್ಟು ಕೊಡಬೇಕಾಗುತ್ತೆ ಅಂತ ಹೇಳಿ ಹಣದ ಬೇಡಿಕೆ ಇಟ್ಟಿದ್ದಾನೆ. ಆತನ ಮಾತನ್ನು ನಂಬಿದ ಚಾಲಕ ಪುರುಷೋತ್ತಮ್, 98 ಸಾವಿರ ರೂ. ಹಣವನ್ನು ನೀಡಿದ್ದಾನೆ. ಆದರೆ, ಶೈಲೇಶ್ ಹಣ ಪಡೆದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
ಹಣ ಕಳೆದುಕೊಂಡ ಚಾಲಕ ಪುರುಷೋತ್ತಮ್ ಈ ಬಗ್ಗೆ ಮಂಡ್ಯದಲ್ಲಿ ದೂರು ದಾಖಲಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು ಆರೋಪಿಯ ಹುಡುಕಾಟ ನಡೆದಿದೆ.
Mandya Man poses himself as CM Yediyurappas PA cheats KSRTC Driver telling him that he would make his transfer from Dharmasthala Depo to Mandya and flees with Rs. 98,000. A case has been registered at the Mandya Police Station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm