ಬ್ರೇಕಿಂಗ್ ನ್ಯೂಸ್
22-06-21 01:05 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22 : ಮೆಟ್ರೋ ಸಿಟಿ ಬೆಂಗಳೂರಿನಲ್ಲಿ ಮೋಸದ ಜಾಲ ಹೆಚ್ಚುತ್ತಲೇ ಬರುತ್ತಿದೆ. ಮನಿ ಡಬ್ಲಿಂಗ್ ಇನ್ವೆಸ್ಟ್ಮೆಂಟ್ ಅಂತ ಪುಂಗಿ ಬಿಟ್ಟು ಸಾಮಾನ್ಯ ಜನರಿಗೆ ಟೋಪಿ ಹಾಕುವ ಖದೀಮರು ಹುಟ್ಟಿಕೊಂಡಿದ್ದಾರೆ. ಶೇ. 25ರಷ್ಟು ಲಾಭಾಂಶದ ಆಮಿಷವೊಡ್ಡಿ ಎರಡು ಸಾವಿರಕ್ಕೂ ಅಧಿಕ ಜನರಿಗೆ ಮೋಸಗೈದ ಘಟನೆ ಬೆಳಕಿಗೆ ಬಂದಿದೆ.
ಆನ್ಲೈನ್ ಡಿಜಿಟೆಕ್ ಮಾರ್ಕ್ ಕಂಪನಿ ಹೆಸರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ವಂಚಿಸಿದ ಡಿ.ಎಸ್.ರಂಗನಾಥ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ನಿರ್ದಿಷ್ಟ ಕಚೇರಿ ಇಲ್ಲದೆ ಜಾಹೀರಾತು ಮೂಲಕ ವಂಚನೆ ಮಾಡುತ್ತಿದ್ದ ಎಂದು ದೂರಲಾಗಿದೆ.

ಶೇಕಡಾ 25ರಷ್ಟು ಲಾಭಾಂಶದ ಆಮಿಷವೊಡ್ಡಿ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಆರಂಭದಲ್ಲಿ 15 ಸಾವಿರ ಹೂಡಿಕೆ ಮಾಡಿ ಸದಸ್ಯತ್ವ ಪಡೀಬೇಕು. ಬಳಿಕ ವರ್ಷಕ್ಕೆ ಹೂಡಿಕೆ ಮಾಡುಲಿದ ಲೆಕ್ಕದಲ್ಲಿ ಲಾಭಾಂಶ ಪಡೆಯಬಹುದು ಎಂದು ಹೇಳುತ್ತಿದ್ದರು. 2021ರ ಡಿಸೆಂಬರ್ ನಲ್ಲಿ 1 ಲಕ್ಷ ಲಾಭಾಂಶ ನೀಡಿಕೆ, 2022ರಲ್ಲಿ 5 ಲಕ್ಷ ರೂಪಾಯಿ, 2023ರಲ್ಲಿ 12 ಲಕ್ಷ ರೂ, 2025ಕ್ಕೆ 25 ಲಕ್ಷ ರೂಪಾಯಿ ಲಾಭ ಎಂದು ಪುಂಗಿ ಬಿಟ್ಟು ವಂಚನೆ ಮಾಡಿದ್ದಾರೆ. ಇನ್ನು ಹೆಚ್ಚಿನ ಬಡ್ಡಿ ಬೇಕಾದರೆ 1 ಲಕ್ಷ ಹೂಡಿಕೆ ಮಾಡಲು ಹೇಳುತ್ತಿದ್ದರು.

ಸದಸ್ಯತ್ವ ಪಡೆದವರಿಗೆ ಯೂಸರ್ ನೇಮ್, ಪಾಸ್ ವರ್ಡ್ ನೀಡಲಾಗುತ್ತಿತ್ತು. ಆ ಮೂಲಕ ಚೈನ್ ಲಿಂಕ್ ಆಧಾರದಲ್ಲಿ ಹೂಡಿಕೆ ಮಾಡಲಾಗುತ್ತಿತ್ತು. ಹೂಡಿಕೆಯಾದ ಕೋಟ್ಯಾಂತರ ಹಣವನ್ನು ಕ್ರಿಪ್ಟೊ ಕರೆನ್ಸಿಯ ಟ್ರೋನ್ ಕಾಯಿನ್ ರೂಪದಲ್ಲಿ ತೋರಿಸಲಾಗುತ್ತಿತ್ತು. ಬಳಿಕ ಕಂಪೆನಿ ಹೆಸರಿನಲ್ಲಿ ಡಿಟಿಎಂ ಟೋಕನ್ ಎಂದು ರೂಪಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅರೆಸ್ಟ್ ಆಗ ರಂಗನಾಥ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Bangalore Man cheats two thousand people of Money Doubling online Digitech CEO arrested. He was arrested by the CCB Police, The accused has been identified as Ranganath.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm