ಬ್ರೇಕಿಂಗ್ ನ್ಯೂಸ್
22-06-21 01:05 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22 : ಮೆಟ್ರೋ ಸಿಟಿ ಬೆಂಗಳೂರಿನಲ್ಲಿ ಮೋಸದ ಜಾಲ ಹೆಚ್ಚುತ್ತಲೇ ಬರುತ್ತಿದೆ. ಮನಿ ಡಬ್ಲಿಂಗ್ ಇನ್ವೆಸ್ಟ್ಮೆಂಟ್ ಅಂತ ಪುಂಗಿ ಬಿಟ್ಟು ಸಾಮಾನ್ಯ ಜನರಿಗೆ ಟೋಪಿ ಹಾಕುವ ಖದೀಮರು ಹುಟ್ಟಿಕೊಂಡಿದ್ದಾರೆ. ಶೇ. 25ರಷ್ಟು ಲಾಭಾಂಶದ ಆಮಿಷವೊಡ್ಡಿ ಎರಡು ಸಾವಿರಕ್ಕೂ ಅಧಿಕ ಜನರಿಗೆ ಮೋಸಗೈದ ಘಟನೆ ಬೆಳಕಿಗೆ ಬಂದಿದೆ.
ಆನ್ಲೈನ್ ಡಿಜಿಟೆಕ್ ಮಾರ್ಕ್ ಕಂಪನಿ ಹೆಸರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ವಂಚಿಸಿದ ಡಿ.ಎಸ್.ರಂಗನಾಥ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ನಿರ್ದಿಷ್ಟ ಕಚೇರಿ ಇಲ್ಲದೆ ಜಾಹೀರಾತು ಮೂಲಕ ವಂಚನೆ ಮಾಡುತ್ತಿದ್ದ ಎಂದು ದೂರಲಾಗಿದೆ.

ಶೇಕಡಾ 25ರಷ್ಟು ಲಾಭಾಂಶದ ಆಮಿಷವೊಡ್ಡಿ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಆರಂಭದಲ್ಲಿ 15 ಸಾವಿರ ಹೂಡಿಕೆ ಮಾಡಿ ಸದಸ್ಯತ್ವ ಪಡೀಬೇಕು. ಬಳಿಕ ವರ್ಷಕ್ಕೆ ಹೂಡಿಕೆ ಮಾಡುಲಿದ ಲೆಕ್ಕದಲ್ಲಿ ಲಾಭಾಂಶ ಪಡೆಯಬಹುದು ಎಂದು ಹೇಳುತ್ತಿದ್ದರು. 2021ರ ಡಿಸೆಂಬರ್ ನಲ್ಲಿ 1 ಲಕ್ಷ ಲಾಭಾಂಶ ನೀಡಿಕೆ, 2022ರಲ್ಲಿ 5 ಲಕ್ಷ ರೂಪಾಯಿ, 2023ರಲ್ಲಿ 12 ಲಕ್ಷ ರೂ, 2025ಕ್ಕೆ 25 ಲಕ್ಷ ರೂಪಾಯಿ ಲಾಭ ಎಂದು ಪುಂಗಿ ಬಿಟ್ಟು ವಂಚನೆ ಮಾಡಿದ್ದಾರೆ. ಇನ್ನು ಹೆಚ್ಚಿನ ಬಡ್ಡಿ ಬೇಕಾದರೆ 1 ಲಕ್ಷ ಹೂಡಿಕೆ ಮಾಡಲು ಹೇಳುತ್ತಿದ್ದರು.

ಸದಸ್ಯತ್ವ ಪಡೆದವರಿಗೆ ಯೂಸರ್ ನೇಮ್, ಪಾಸ್ ವರ್ಡ್ ನೀಡಲಾಗುತ್ತಿತ್ತು. ಆ ಮೂಲಕ ಚೈನ್ ಲಿಂಕ್ ಆಧಾರದಲ್ಲಿ ಹೂಡಿಕೆ ಮಾಡಲಾಗುತ್ತಿತ್ತು. ಹೂಡಿಕೆಯಾದ ಕೋಟ್ಯಾಂತರ ಹಣವನ್ನು ಕ್ರಿಪ್ಟೊ ಕರೆನ್ಸಿಯ ಟ್ರೋನ್ ಕಾಯಿನ್ ರೂಪದಲ್ಲಿ ತೋರಿಸಲಾಗುತ್ತಿತ್ತು. ಬಳಿಕ ಕಂಪೆನಿ ಹೆಸರಿನಲ್ಲಿ ಡಿಟಿಎಂ ಟೋಕನ್ ಎಂದು ರೂಪಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅರೆಸ್ಟ್ ಆಗ ರಂಗನಾಥ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Bangalore Man cheats two thousand people of Money Doubling online Digitech CEO arrested. He was arrested by the CCB Police, The accused has been identified as Ranganath.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm