ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.
ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm