ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm