ಬ್ರೇಕಿಂಗ್ ನ್ಯೂಸ್
22-06-21 08:07 pm Satish, Bengaluru ಕ್ರೈಂ
ಬೆಂಗಳೂರು, ಜೂನ್ 22: ಟೆಕ್ಕಿಯೊಬ್ಬರು ಕೊರೊನಾ ಸೋಂಕಿನಿಂದ ತನ್ನ ಹೆಂಡತಿಯನ್ನು ಕಳೆದುಕೊಂಡಿರುವ ನಡುವಲ್ಲೇ ಆತನ ಸ್ವಂತ ಕುಟುಂಬಸ್ಥರೇ ಬೆನ್ನಿಗೆ ಚೂರಿ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜರಾಜೇಶ್ವರಿ ನಗರದ ಪ್ರವೀಣ್ ಹಾಗೂ ನಿಮಿತಾ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಗಳಾಗಿದ್ದರು. ಈ ನಡುವೆ ನಿಮಿತಾ ಕಳೆದ ಏಪ್ರಿಲ್ 20ರಂದು ಕೊರೊನಾ ಸೋಂಕಿಗೆ ಒಳಗಾಗಿ ಉಸಿರಾಟದ ಸಮಸ್ಯೆಗೆ ಸಿಲುಕಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.

ಆಬಳಿಕ ಮೇ 13ಕ್ಕೆ ಪತ್ನಿಯ ಸಾವಿನ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ, ಪತ್ನಿಯ ಕುಟುಂಬಸ್ಥರು ನಿಮಿತಾ ಮೃತಪಟ್ಟ ಸಮಯ ಸರಿಯಿಲ್ಲ. ಅಪಶಕುನ ಇದೆ. ಮೂರು ತಿಂಗಳ ಕಾಲ ನೀನು ಮನೆಗೆ ಬರುವುದು ಬೇಡ ಎಂದು ಪ್ರವೀಣ್ ಅವರನ್ನು ನಿಮಿತಾ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.
ಆದರೆ, ಪ್ರವೀಣ್ ಒಂದು ತಿಂಗಳು ಆಗುವಷ್ಟರಲ್ಲಿ ಮನೆಗೆ ಮರಳಿದ್ದಾರೆ. ಮನೆಗೆ ಬಂದು ನೋಡಿದಾಗ, ಪ್ರವೀಣ್ ಗೆ ಆಘಾತ ಕಾದಿತ್ತು. ಮನೆಯಲ್ಲಿದ್ದ ಆರು ಲಕ್ಷ ರೂ. ಮೌಲ್ಯದ ಪತ್ನಿಯ ಚಿನ್ನಾಭರಣ ಹಾಗೂ ಮೂರು ಲಕ್ಷ ರೂ. ನಗದು, ಕಾರನ್ನು ಸಂಬಂಧಿಕರು ದೋಚಿದ್ದು ಕಂಡುಬಂದಿದೆ. ಪತ್ನಿಯ ಬಾವ ಶಿವಪ್ಪ ಹಾಗೂ ಆಕೆಯ ಸೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ಬದಲು ಎನ್ಸಿಆರ್ ದಾಖಲಿಸಿ ರಾಜಿಯಲ್ಲಿ ಮುಗಿಸಲು ನೋಡಿದ್ದಾರೆ. ದೂರಿನ ಬಗ್ಗೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸದೇ ಆರೋಪಿಗಳ ಪರ ವಕಾಲತ್ತು ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
Bangalore Family loots Gold cash and car from Man who lost his wife due to Covid. A case has been registered at the R R Nagar Police Station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm