ಬ್ರೇಕಿಂಗ್ ನ್ಯೂಸ್
22-06-21 08:07 pm Satish, Bengaluru ಕ್ರೈಂ
ಬೆಂಗಳೂರು, ಜೂನ್ 22: ಟೆಕ್ಕಿಯೊಬ್ಬರು ಕೊರೊನಾ ಸೋಂಕಿನಿಂದ ತನ್ನ ಹೆಂಡತಿಯನ್ನು ಕಳೆದುಕೊಂಡಿರುವ ನಡುವಲ್ಲೇ ಆತನ ಸ್ವಂತ ಕುಟುಂಬಸ್ಥರೇ ಬೆನ್ನಿಗೆ ಚೂರಿ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜರಾಜೇಶ್ವರಿ ನಗರದ ಪ್ರವೀಣ್ ಹಾಗೂ ನಿಮಿತಾ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಗಳಾಗಿದ್ದರು. ಈ ನಡುವೆ ನಿಮಿತಾ ಕಳೆದ ಏಪ್ರಿಲ್ 20ರಂದು ಕೊರೊನಾ ಸೋಂಕಿಗೆ ಒಳಗಾಗಿ ಉಸಿರಾಟದ ಸಮಸ್ಯೆಗೆ ಸಿಲುಕಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.

ಆಬಳಿಕ ಮೇ 13ಕ್ಕೆ ಪತ್ನಿಯ ಸಾವಿನ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ, ಪತ್ನಿಯ ಕುಟುಂಬಸ್ಥರು ನಿಮಿತಾ ಮೃತಪಟ್ಟ ಸಮಯ ಸರಿಯಿಲ್ಲ. ಅಪಶಕುನ ಇದೆ. ಮೂರು ತಿಂಗಳ ಕಾಲ ನೀನು ಮನೆಗೆ ಬರುವುದು ಬೇಡ ಎಂದು ಪ್ರವೀಣ್ ಅವರನ್ನು ನಿಮಿತಾ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.
ಆದರೆ, ಪ್ರವೀಣ್ ಒಂದು ತಿಂಗಳು ಆಗುವಷ್ಟರಲ್ಲಿ ಮನೆಗೆ ಮರಳಿದ್ದಾರೆ. ಮನೆಗೆ ಬಂದು ನೋಡಿದಾಗ, ಪ್ರವೀಣ್ ಗೆ ಆಘಾತ ಕಾದಿತ್ತು. ಮನೆಯಲ್ಲಿದ್ದ ಆರು ಲಕ್ಷ ರೂ. ಮೌಲ್ಯದ ಪತ್ನಿಯ ಚಿನ್ನಾಭರಣ ಹಾಗೂ ಮೂರು ಲಕ್ಷ ರೂ. ನಗದು, ಕಾರನ್ನು ಸಂಬಂಧಿಕರು ದೋಚಿದ್ದು ಕಂಡುಬಂದಿದೆ. ಪತ್ನಿಯ ಬಾವ ಶಿವಪ್ಪ ಹಾಗೂ ಆಕೆಯ ಸೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ಬದಲು ಎನ್ಸಿಆರ್ ದಾಖಲಿಸಿ ರಾಜಿಯಲ್ಲಿ ಮುಗಿಸಲು ನೋಡಿದ್ದಾರೆ. ದೂರಿನ ಬಗ್ಗೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸದೇ ಆರೋಪಿಗಳ ಪರ ವಕಾಲತ್ತು ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
Bangalore Family loots Gold cash and car from Man who lost his wife due to Covid. A case has been registered at the R R Nagar Police Station.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm