ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm