ಬ್ರೇಕಿಂಗ್ ನ್ಯೂಸ್
24-06-21 02:00 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 24:ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಗಾಳಿಪಟ ದಾರ ಸಿಕ್ಕಿಕೊಂಡು ಕತ್ತು ಸೀಳಿರುವ ಘಟನೆ ಆಡುಗೋಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತು ಆಸ್ಪತ್ರೆಯಿಂದ ವಿಡಿಯೋ ಮಾಡುವ ಮೂಲಕ ಯುವಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನೇನು ಕುತ್ತಿಗೆ ಸೀಳಿ ತಲೆ ಬೇರ್ಪಡಬೇಕಿತ್ತು. ಚಾಣಾಕ್ಷತೆ ಮೆರೆದು ಜೀವ ಉಳಿಸಿಕೊಂಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ವಿಡಿಯೋ ಮಾಡಿದ್ದು, ಎಲ್ಲರಿಗೂ ನಮಸ್ಕಾರ, ನಾನು ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಹೋಗುತ್ತಿದ್ದೆ. ಆಡುಗೋಡಿ ಪೊಲೀಸ್ ಠಾಣೆ ಮುಂದೆ ಹೋಗುತ್ತಿದ್ದೆ. ಗಾಳಿಪಟದ ದಾರವೊಂದು ಕುತ್ತಿಗೆಗೆ ಸಿಕ್ಕಿದೆ. ಕೂಡಲೇ ಎಚ್ಚೆತ್ತು ಕೈಯಿನಿಂದ ದಾರವನ್ನು ಎಳೆದೆ. ಅದರಿಂದ ನನ್ನ ಎರಡೂ ಬೆರಳು ತುಂಡಾಗುವಷ್ಟು ದಾರ ಕತ್ತರಿಸಿದೆ. ನಾನು ಸರ್ಕಾರಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳುವುದು ಇಷ್ಟೇ. ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧ ಮಾಡಿ. ಎಷ್ಟೋ ಪಕ್ಷಿಗಳು ಜೀವ ಕಳೆದುಕೊಳ್ಳುತ್ತಿವೆ. ಇದರ ಜತೆಗೆ ಇದೀಗ ಜನರು ಜೀವ ಕಳೆದುಕೊಳ್ಳುವಂತಾಗಿದೆ. ನಾನು ಸ್ವಲ್ಪ ಯಾಮಾರಿದ್ದರೆ ನನ್ನ ರುಂಡ ನೋಡಬೇಕಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧ ಮಾಡಿ ಎಂದು ಆತ ಮನವಿ ಮಾಡಿಕೊಂಡಿದ್ದಾನೆ. ಅಂದಹಾಗೆ ಈ ವ್ಯಕ್ತಿಯ ವಿವರ ಬಹಿರಂಗ ಪಡಿಸಿಲ್ಲ. ಆದರೆ ಈತ ಮಾಡಿರುವ ವಿಡಿಯೋ ಮಾತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಗಾಳಿಪಟದ ದಾರಗಳು ಪಕ್ಷಿಗಳ ಜೀವಕ್ಕೂ ಅಪಾಯ ತಂದೊಡ್ಡಿವೆ. ಇತ್ತೀಚೆಗೆ ದಾರಕ್ಕೆ ನವಿಲು ಸಿಲುಕಿ ಮೂರು ದಿನ ಒದ್ದಾಡಿತ್ತು. ಬಳಿಕ ವನ್ಯ ಜೀವಿ ಸಂರಕ್ಷಕರು ಅದನ್ನು ರಕ್ಷಿಸಿದ್ದರು. ಅನೇಕ ಹದ್ದುಗಳು ಬೆಂಗಳೂರಿನಲ್ಲಿ ಜೀವ ಕಳೆದುಕೊಂಡಿವೆ. ಪಾರಿವಾಳಗಳೂ ಕೂಡ ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡಿ ಜೀವ ಕಳೆದುಕೊಂಡಿವೆ. ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧಿಸುವ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಚಿಂತನೆ ಮಾಡಬೇಕಿದೆ.
A Two-wheeler rider was seriously injured when his neck was cut by a thread used to fly kites. The incident took place in Bangalore. The video of this has gone viral on social media.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm