ಬ್ರೇಕಿಂಗ್ ನ್ಯೂಸ್
26-06-21 02:38 pm Headline Karnataka News Network ಕ್ರೈಂ
ಲಕ್ನೋ, ಜೂನ್ 26: ಬ್ಯಾಂಕಿಗೆ ಆಗಮಿಸಿದ್ದ ಗ್ರಾಹಕನೊಬ್ಬ ಮಾಸ್ಕ್ ವಿಚಾರದಲ್ಲಿ ವಾಗ್ವಾದ ಮಾಡಿದ ಸಿಟ್ಟಿನಲ್ಲಿ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ತನ್ನ ಪಿಸ್ತೂಲಿನಲ್ಲಿ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಗ್ರಾಹಕ ರಕ್ತದೋಕುಳಿಯಲ್ಲಿ ಬಿದ್ದು ಹೊರಳಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
28 ವರ್ಷದ ರಾಜೇಶ್ ಕುಮಾರ್ ಎಂಬ ಯುವಕ ಶುಕ್ರವಾರ ಮಧ್ಯಾಹ್ನ ಬ್ಯಾಂಕಿಗೆ ಆಗಮಿಸಿದ್ದ. ಆದರೆ, ಮಾಸ್ಕ್ ಹಾಕದೇ ಇರುವ ಯಾರಿಗೂ ಪ್ರವೇಶ ನೀಡುವುದಿಲ್ಲ ಎಂದು ಹೇಳಿ ಸೆಕ್ಯುರಿಟಿ ಗಾರ್ಡ್ ಆತನನ್ನು ಹಿಂದಕ್ಕೆ ಕಳಿಸಿದ್ದ. ಬ್ಯಾಂಕ್ ಒಳಗೆ ಸಿಬಂದಿ ಮಾಸ್ಕ್ ಹಾಕಿಲ್ಲ. ನಾನ್ಯಾಕೆ ಹಾಕಬೇಕು ಎಂದು ಯುವಕ ವಾದ ಮಾಡಿ ಅಲ್ಲಿಂದ ತೆರಳಿದ್ದ. ಸ್ವಲ್ಪ ಹೊತ್ತಿನಲ್ಲಿ ರಾಜೇಶ್ ಮಾಸ್ಕ್ ಹಾಕ್ಕೊಂಡೇ ಬ್ಯಾಂಕಿಗೆ ಬಂದಿದ್ದಾನೆ. ಅಷ್ಟರಲ್ಲಿ ಮಧ್ಯಾಹ್ನ ಆಗಿದ್ದು, ಬ್ಯಾಂಕ್ ಸಿಬಂದಿ ಊಟಕ್ಕೆ ಹೋಗಿದ್ದಾರೆ. ಈಗ ಒಳಗೆ ಬಿಡಲು ಆಗುವುದಿಲ್ಲ ಎಂದು ಹೇಳಿ ಸೆಕ್ಯುರಿಟಿ ಗಾರ್ಡ್ ಮತ್ತೆ ವಾಪಸ್ ಕಳಿಸಿದ್ದಾನೆ.



ಇದರಿಂದ ಸಿಟ್ಟಾದ ರಾಜೇಶ್ ಮತ್ತು ಸೆಕ್ಯುರಿಟಿ ಗಾರ್ಡ್ ಮಧ್ಯೆ ವಾಗ್ವಾದ, ತಳ್ಳಾಟ ಆಗಿದೆ. ಇದರಿಂದ ಸಿಟ್ಟಿಗೆದ್ದ ಸೆಕ್ಯುರಿಟಿ ಗಾರ್ಡ್ ಕೇಶವ್, ತನ್ನ ಕೈಲಿದ್ದ ಗನ್ ಹಿಡಿದು ಗುಂಡು ಹಾರಿಸಿದ್ದಾನೆ. ರಾಜೇಶ್ ಕಾಲಿನ ತೊಡೆಯ ಭಾಗಕ್ಕೆ ಗುಂಡೇಟು ಬಿದ್ದಿದ್ದು, ನೆಲಕ್ಕೆ ಬಿದ್ದ ರಾಜೇಶ್ ರಕ್ತದೋಕುಳಿಯಲ್ಲಿ ಹೊರಳಾಡಿದ್ದಾನೆ. ಆನಂತರ ಅಲ್ಲಿಗೆ ರಾಜೇಶ್ ಕುಮಾರ್ ಪತ್ನಿ ಕೂಡ ಆಗಮಿಸಿದ್ದು, ಸೆಕ್ಯುರಿಟಿ ಗಾರ್ಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು, ಪತ್ನಿಯ ಗೋಳಾಟದ ವಿಡಿಯೋ ವೈರಲ್ ಆಗಿದೆ.
ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಸೆಕ್ಯುರಿಟಿ ಗಾರ್ಡನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಿಚಾರಿಸಿದಾಗ, ಅಕಸ್ಮಾತ್ ಕೈತಪ್ಪಿ ಗುಂಡು ಹಾರಿತ್ತು. ಉದ್ದೇಶಪೂರ್ವಕ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದಾನೆ. ಆದರೆ, ಆತನ ವಿರುದ್ಧ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
Resident of civil lines Rajesh was shot in his leg allegedly by guard Keshav Kumar, who is currently in police custody. #Bareilly pic.twitter.com/cAumwL8o1g
— Arvind Chauhan (@Arv_Ind_Chauhan) June 25, 2021
Security Guard Open Fire at Customer Who Trying To Enter Inside bank Without Mask Uttar Pradesh.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm