ಬ್ರೇಕಿಂಗ್ ನ್ಯೂಸ್
26-06-21 05:36 pm Mangalore Correspondent ಕ್ರೈಂ
ಉಡುಪಿ, ಜೂನ್ 26: ಇಲ್ಲಿನ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟ್ರಕ್ ಚಾಲಕನಿಗೆ ಅಲ್ಲಿನ ಸಿಬಂದಿಯೇ ಸೇರಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಇದನ್ನು ಸೈಕ್ಲಿಸ್ಟ್ ಆಗಿರುವ ವ್ಯಕ್ತಿಯೊಬ್ಬ ಮೊಬೈಲಿನಲ್ಲಿ ಚಿತ್ರೀಕರಿಸಿ, ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ.
ಯಾರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆಂದು ತಿಳಿದುಬಂದಿಲ್ಲ. ಆದರೆ, ಆತ ಇಂಗ್ಲಿಷ್ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾನೆ. ನಾನು ಸೈಕಲ್ ನಲ್ಲಿ ಸಾಗುತ್ತಿದ್ದಾಗ, ಟೋಲ್ ಸಿಬಂದಿ ಲಾರಿ ಚಾಲಕನಿಗೆ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದೇನೆ. ಆದರೆ, ಅಲ್ಲಿನ ಸಿಬಂದಿ ನನ್ನನ್ನು ಪ್ರಶ್ನೆ ಮಾಡಿದ್ದು, ಹಲ್ಲೆ ನಡೆಸಲು ಮುಂದಾಗಿದ್ದಾರೆ. ವಿಡಿಯೋ ಡಿಲೀಟ್ ಮಾಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಇಲ್ಲದಿದ್ದರೆ ಸೈಕಲ್ ಕೊಡುವುದಿಲ್ಲ ಎಂದು ಹೇಳಿ, ಸೈಕಲನ್ನು ತೆಗೆದಿಟ್ಟಿದ್ದರು.




ಅಲ್ಲಿಯೇ ಸ್ವಲ್ಪ ದೂರದಲ್ಲಿ ಹೊಯ್ಸಳ ಪೊಲೀಸರು ನಿಂತುಕೊಂಡಿದ್ದರು. ನಮ್ಮ ಜಗಳವನ್ನು ನೋಡಿ, ಪೊಲೀಸರು ಅಲ್ಲಿಗೆ ಬಂದಿದ್ದು ನಾನು ಅವರಿಗೆ ಘಟನೆಯನ್ನು ವಿವರಿಸಿದ್ದೇನೆ. ಅಲ್ಲದೆ, ನಾನೊಬ್ಬ ಮಾಧ್ಯಮದ ವ್ಯಕ್ತಿಯೆಂದು ಹೇಳಿದರೂ, ಪೊಲೀಸರು ಸಹಾಯಕ್ಕೆ ಬರಲಿಲ್ಲ. ಪೊಲೀಸರ ಎದುರಲ್ಲೇ ನನಗೆ ಟೋಲ್ ಸಿಬಂದಿ, ನೀನು ಎಲ್ಲಿ ಬೇಕಾದ್ರೂ ಕಂಪ್ಲೇಂಟ್ ಮಾಡು. ಏನೂ ಆಗುವುದಿಲ್ಲ ಎಂದು ಆವಾಜ್ ಹಾಕಿದ್ದಾಗಿ ಬರೆದುಕೊಂಡಿದ್ದಾನೆ. ಅಲ್ಲದೆ, ಟೋಲ್ ಸಿಬಂದಿ ಯಾರು ಕೂಡ ಮಾಸ್ಕ್ ಧರಿಸಿರಲಿಲ್ಲ. ಉಡುಪಿ ಜಿಲ್ಲಾಧಿಕಾರಿ ಈ ಬಗ್ಗೆ ಕ್ರಮ ಜರುಗಿಸುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾನೆ. ಆದರೆ, ಈ ವಿಡಿಯೋ ಮಾಡಿದ್ದು ಯಾರೆಂದು ಗೊತ್ತಾಗಿಲ್ಲ. ವಿಡಿಯೋದಲ್ಲಿ ಟ್ರಕ್ ಚಾಲಕನಿಗೆ ಹಲ್ಲೆ ನಡೆಸುವುದು ದಾಖಲಾಗಿದೆ. ವಿಡಿಯೋ ಆಧರಿಸಿ, ಪೊಲೀಸರು ಸುಮೊಟೋ ಕೇಸು ದಾಖಲಿಸಿ ಟೋಲ್ ಸಿಬಂದಿಯ ಮೇಲೆ ಕ್ರಮ ಜರುಗಿಸಬಹುದು.
Video:
Udupi Hejamadi toll gate staffs assault truck driver over tag issue video goes viralಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸಿಬಂದಿಯ ಗೂಂಡಾಗಿರಿ ; ಲಾರಿ ಚಾಲಕನಿಗೆ ಹಲ್ಲೆ ವಿಡಿಯೋ ವೈರಲ್
Posted by Headline Karnataka on Saturday, June 26, 2021
Udupi Hejamadi toll gate staffs assault truck driver over tag issue video goes viral. A cyclist who was said to be recording the video also was threatened by the staff for shooting the video.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm