ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.

ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm