ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.

ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm