ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.

ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am