ಬ್ರೇಕಿಂಗ್ ನ್ಯೂಸ್
28-06-21 09:47 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 28: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಅತ್ತಿಗೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಕೊಲೆಗೆ ಸಂಚು ನಡೆಸಿದ್ದರು.
ಕೊಲೆಗೆ ಸಂಬಂಧಿಸಿ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್ ಎಂಬವರನ್ನು ಬಂಧಿಸಿದ್ದರು. ಮಾಲಾ ಕದಿರೇಶ್ ಅವರ ಅಕ್ಕನಾಗಿದ್ದು ಬಂಧಿತ ವ್ಯಕ್ತಿಗಳು ನೀಡಿದ ಮಾಹಿತಿ ಆಧರಿಸಿ ಮಾಲಾ ಮತ್ತು ಆಕೆಯ ಮಗನನ್ನು ಪ್ರಶ್ನಿಸಲಾಗಿತ್ತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪೀಟರ್ ಕದಿರೇಶ್ ಆಪ್ತನಾಗಿದ್ದು, ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಪೀಟರ್ ಕದಿರೇಶ್ಗೆ ಹತ್ತಿರವಾಗಿದ್ದನು. ಅಲ್ಲದೆ ಕದಿರೇಶ್ ಕೊಲೆಯಾದ ನಂತರ ರೇಖಾ, ಪೀಟರ್ ನನ್ನು ದೂರವಿರಿಸಿದ್ದಲ್ಲದೆ ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದ. ಇದನ್ನೇ ಗುರಾಣಿಯನ್ನಾಗಿಸಿದ ಮಾಲಾ ಮತ್ತು ಆಕೆಯ ಮಗ, ಪೀಟರನ್ನು ಛೂಬಿಟ್ಟು ಕೊಲೆ ಮಾಡಿಸಿದ್ದಾರೆ. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳು ಎಂದು ಪೊಲೀಸರು ಹೇಳಿದ್ದಾರೆ.
ರೇಖಾ ಕದಿರೇಶ್ ಕೊಲೆಗೆ ಗಂಡನ ಸೋದರಿಯದ್ದೇ ಸುಪಾರಿ ; ರಾಜಕೀಯದ ಮೇಲೆ ಕಣ್ಣಿಟ್ಟಿದ್ದ ಮಾಲಾ !?
The murder case of former BBMP corporator Rekha Kadiresh has got an explosive twist. It is confirmed during interrogation that Mala, sister-in-law of deceased and her son Arul are involved in the killing of Rekha. Both are arrested by the police. With their arrest, the number of people arrested in this gruesome, daylight murder is risen to seven.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm