ಬ್ರೇಕಿಂಗ್ ನ್ಯೂಸ್
28-06-21 09:47 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 28: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಅತ್ತಿಗೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಕೊಲೆಗೆ ಸಂಚು ನಡೆಸಿದ್ದರು.
ಕೊಲೆಗೆ ಸಂಬಂಧಿಸಿ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್ ಎಂಬವರನ್ನು ಬಂಧಿಸಿದ್ದರು. ಮಾಲಾ ಕದಿರೇಶ್ ಅವರ ಅಕ್ಕನಾಗಿದ್ದು ಬಂಧಿತ ವ್ಯಕ್ತಿಗಳು ನೀಡಿದ ಮಾಹಿತಿ ಆಧರಿಸಿ ಮಾಲಾ ಮತ್ತು ಆಕೆಯ ಮಗನನ್ನು ಪ್ರಶ್ನಿಸಲಾಗಿತ್ತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪೀಟರ್ ಕದಿರೇಶ್ ಆಪ್ತನಾಗಿದ್ದು, ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಪೀಟರ್ ಕದಿರೇಶ್ಗೆ ಹತ್ತಿರವಾಗಿದ್ದನು. ಅಲ್ಲದೆ ಕದಿರೇಶ್ ಕೊಲೆಯಾದ ನಂತರ ರೇಖಾ, ಪೀಟರ್ ನನ್ನು ದೂರವಿರಿಸಿದ್ದಲ್ಲದೆ ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದ. ಇದನ್ನೇ ಗುರಾಣಿಯನ್ನಾಗಿಸಿದ ಮಾಲಾ ಮತ್ತು ಆಕೆಯ ಮಗ, ಪೀಟರನ್ನು ಛೂಬಿಟ್ಟು ಕೊಲೆ ಮಾಡಿಸಿದ್ದಾರೆ. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳು ಎಂದು ಪೊಲೀಸರು ಹೇಳಿದ್ದಾರೆ.
ರೇಖಾ ಕದಿರೇಶ್ ಕೊಲೆಗೆ ಗಂಡನ ಸೋದರಿಯದ್ದೇ ಸುಪಾರಿ ; ರಾಜಕೀಯದ ಮೇಲೆ ಕಣ್ಣಿಟ್ಟಿದ್ದ ಮಾಲಾ !?
The murder case of former BBMP corporator Rekha Kadiresh has got an explosive twist. It is confirmed during interrogation that Mala, sister-in-law of deceased and her son Arul are involved in the killing of Rekha. Both are arrested by the police. With their arrest, the number of people arrested in this gruesome, daylight murder is risen to seven.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm