ಬ್ರೇಕಿಂಗ್ ನ್ಯೂಸ್
29-06-21 10:11 pm Mangaluru Correspondent ಕ್ರೈಂ
ಪುತ್ತೂರು, ಜೂನ್ 29: ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ರಾಮಕುಂಜ ಬಳಿಯ ಆತೂರು ಎಂಬಲ್ಲಿ ಪೊಲೀಸ್ ಚೆಕ್ ಪೋಸ್ಟ್ ಹಾಕಿದ್ದನ್ನು ವಿರೋಧಿಸಿ ಗುಂಪೊಂದು ದಾಂಧಲೆ ನಡೆಸಿದ್ದು, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಆತೂರು ಚೆಕ್ ಪೋಸ್ಟಿನಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಕಡಬ ಎಸ್ಐ ಮತ್ತು ಸಿಬಂದಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಉಪ್ಪಿನಂಗಡಿ ಕಡೆಯಿಂದ ವೇಗವಾಗಿ ಬಂದ ಟಾಟಾ ಏಸ್ ವಾಹನ (ಕೆಎ 21ಬಿ 6482) ಚೆಕ್ ಪೋಸ್ಟ್ ನಲ್ಲಿ ರಸ್ತೆ ದಾಟುತ್ತಿದ್ದ ಹ್ಯಾರಿಸ್ ಎಂಬಾತನಿಗೆ ಡಿಕ್ಕಿಯಾಗಿ ಪರಾರಿಯಾಗಿದೆ. ಚೆಕ್ ಪೋಸ್ಟ್ ನಲ್ಲಿ ವಾಹನ ನಿಲ್ಲಿಸದೆ ಮುಂದೆ ಹೋಗಿದ್ದರಿಂದ ವಾಹನ ಪಾದಚಾರಿಗೆ ಡಿಕ್ಕಿಯಾಗಿತ್ತು. ಗಾಯಗೊಂಡ ಹ್ಯಾರೀಸ್ ನನ್ನು ಕೂಡಲೇ ಕಡಬ ಎಸ್ಐ ತಮ್ಮ ವಾಹನದಲ್ಲಿ ಉಪ್ಪಿನಂಗಡಿಯ ಆಸ್ಪತ್ರೆಗೆ ಒಯ್ದಿದ್ದರು.

ಆನಂತರ ಸ್ವಲ್ಪ ಹೊತ್ತಿನಲ್ಲಿ ಆತೂರು ಚೆಕ್ ಪೋಸ್ಟ್ ನಲ್ಲಿ 50-60 ಮಂದಿ ಸೇರಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ಪೈಕಿ 10-15 ಜನ ಕಿಡಿಗೇಡಿಗಳು ಅಲ್ಲಿದ್ದ ಪೊಲೀಸರನ್ನು ಉದ್ದೇಶಿಸಿ, ನಿಂದಿಸಿದ್ದಾರೆ. ಬಳಿಕ ಇಲ್ಲಿ ರಸ್ತೆಗೆ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಿದರೆ ನಮಗೆ ತೊಂದರೆಯಾಗುತ್ತದೆ. ಇಲ್ಲಿ ಯಾವುದೇ ಬ್ಯಾರಿಕೇಡ್ ಬೇಡ ಎಂದು ಅವುಗಳನ್ನು ಕಿತ್ತು ಹಾಕಿದ್ದಾರೆ.
ಅಲ್ಲದೆ, ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಜಿನ್ನಪ್ಪ ಮತ್ತು ಸಿಬಂದಿ ಹರೀಶ್ ಕುಮಾರ್ ಮೇಲೆ ಮೈಗೆ ಕೈಹಾಕಿ ದೂಡಿ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪೊಲೀಸರು ನಿಲ್ಲುವುದಕ್ಕಾಗಿ ಸ್ಥಳೀಯ ಸಾರ್ವಜನಿಕರು ನಿರ್ಮಿಸಿಕೊಟ್ಟಿದ್ದ ಚೆಕ್ ಪೋಸ್ಟ್ ಶೆಡ್ ಅನ್ನು ಧ್ವಂಸ ಮಾಡಿದ್ದು ಅಲ್ಲಿದ್ದ ಮೂರು ಪ್ಲಾಸ್ಟಿಕ್ ಚೇರ್ ಗಳನ್ನೂ ಪುಡಿ ಮಾಡಿದ್ದಾರೆ. ಅಲ್ಲದೆ, ಇಲ್ಲಿ ಚೆಕ್ ಪೋಸ್ಟ್ ಹಾಕಿದರೆ ನಿಮ್ಮನ್ನು ಮತ್ತು ನಿಮ್ಮ ಇಲಾಖಾ ಸಿಬಂದಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ಆವಾಜ್ ಹಾಕಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಜಿನ್ನಪ್ಪ ಕಡಬ ಠಾಣೆಗೆ ದೂರು ನೀಡಿದ್ದು, 10ರಿಂದ 15 ಮಂದಿ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ದಾಂಧಲೆ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
Kadaba Dispute arises for placing Police Checkpost gang assaults Police personal .
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm